Webdunia - Bharat's app for daily news and videos

Install App

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಭಾನುವಾರ, 16 ಜೂನ್ 2019 (08:56 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಹಿರಿಯರಿಗೆ ಸಂತಸಕೊಡುವ ಕೆಲಸ ಮಾಡುವಿರಿ. ದೇವಾಲಯಗಳಿಗೆ ಭೇಟಿ ಕೊಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಎಂದಿನ ಕಾರ್ಯದೊತ್ತಡವಿರಲಿದೆ. ಆರ್ಥಿಕವಾಗಿ ಸಮಾಧಾನಕರ ದಿನ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ನೀವು ತೆಗೆದುಕೊಳ್ಳುವ ಕೆಲವೊಂದು ನಿರ್ಧಾರಗಳು ಬಂಧು ವರ್ಗದವರ ಅಸಮಾಧಾನಕ್ಕೆ ಕಾರಣವಾಗಬಹುದು. ಕೌಟುಂಬಿಕವಾಗಿ ನಿಮ್ಮ ಜವಾಬ್ಧಾರಿಗಳು ಹೆಚ್ಚಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ.

ಮಿಥುನ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಕುಲದೇವರ ಹರಕೆ ತೀರಿಸಿದರೆ ಕೈಗೊಂಡ ಕಾರ್ಯಗಳು ನಿರ್ವಿಘ್ನವಾಗಿ ನೆರವೇರುವುದು. ಆರ್ಥಿಕವಾಗಿ ಧನಾಗಮನಕ್ಕೆ ಕೊರತೆಯಿರದು. ಆದರೆ ಖರ್ಚಿನ ಬಗ್ಗೆ ಹಿಡಿತವಿರಲಿ.

ಕರ್ಕಟಕ: ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಶುಭ ಸುದ್ದಿ ಆಲಿಸುವಿರಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರಿಂದ ಅಪವಾದದ ಭೀತಿಯಿದೆ. ಎಚ್ಚರಿಕೆ ಅಗತ್ಯ.

ಸಿಂಹ: ಹೊಸ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಆರ್ಥಿಕವಾಗಿ ಸಾಕಷ್ಟು ಲಾಭ ಗಳಿಸುವಿರಿ. ಸಂಗಾತಿಯ ಇಷ್ಟಗಳಿಗೆ ಬೆಲೆ ಕೊಡುವಿರಿ. ಭೂಮಿ, ಮನೆ ಖರೀದಿಗೆ ಸಕಾಲ. ದೈವಾನುಗ್ರಹ ನಿಮ್ಮ ಮೇಲಿರಲಿದೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹಾಯಾಸವಾದೀತು. ಹಿರಿಯರ ಆರೋಗ್ಯ ಚಿಂತೆ ಹೆಚ್ಚು ಮಾಡುವುದು. ಆದರೆ ಸಂಗಾತಿಯ ಸಹಕಾರ ನಿಮಗೆ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.

ತುಲಾ: ಚಿನ್ನಾಭರಣ ಖರೀದಿ ಮಾಡುವಿರಿ. ಆರ್ಥಿಕವಾಗಿ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆದರೆ ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ವಂಚನೆಗೊಳಗಾಗುವ ಭೀತಿಯಿದೆ. ಕಿರು ಸಂಚಾರ ಯೋಗವಿದ್ದು, ಎಚ್ಚರಿಕೆ ಅಗತ್ಯ.

ವೃಶ್ಚಿಕ: ನಿರುದ್ಯೋಗಿಗಳು ಉದ್ಯೋಗ ನಿಮಿತ್ತ ವಿದಶ ಪ್ರಯಾಣ ಮಾಡುವ ಸಾಧ್ಯತೆಯಿದೆ. ಮೇಲ್ವರ್ಗದ ಅಧಿಕಾರಿಗಳಿಗೆ ಮುನ್ನಡೆ ಯೋಗವಿದೆ. ಸಂತಾನ ಹೀನ ದಂಪತಿ ಧಾರ್ಮಿಕ ಪರಿಹಾರ ಕಂಡುಕೊಳ್ಳಲು ಮುಂದಾಗುವರು.

ಧನು: ಬೇಡದ ಮಾತಿಗೆ ಕಿವಿಗೊಟ್ಟು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮಾಡಬೇಕಾದ ಸಮಯವಿದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ.

ಮಕರ: ಉದ್ದೇಶಿಕ ಕಾರ್ಯಗಳಿಗೆ ಕೆಲವೊಂದು ಅಡ್ಡಿ ಆತಂಕಗಳು ಎದುರಾದೀತು. ಮನೆಯಲ್ಲಿ ಅವಿವಾಹಿತ ಸೋದರಿಯರಿದ್ದರೆ ಅವರ ವಿವಾಹಾದಿ ಪ್ರಯತ್ನ ನಡೆಸುವಿರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಬೇಕಾಗುತ್ತದೆ.

ಕುಂಭ: ಬಂಧು ಮಿತ್ರರೊಂದಿಗೆ ಪ್ರವಾಸ, ಮೋಜು ಮಾಡುವ ಸಾಧ್ಯತೆಯಿದೆ. ಆದರೆ ವಾಹನ ಚಲಾಯಿಸುವಾಗ ಎಚ್ಚರ ತಪ್ಪಿದರೆ ಅಪಾಯ ಗ್ಯಾರಂಟಿ. ನಿರುದ್ಯೋಗಿಗಳು ಕುಲದೇವರ ಪ್ರಾರ್ಥನೆ ಮಾಡಿದರೆ ಅಂದುಕೊಂಡಿದ್ದು ನೆರವೇರುವುದು.

ಮೀನ: ಸರಕಾರಿ ಕಚೇರಿ, ಕೋರ್ಟು ವ್ಯವಹಾರಗಳಲ್ಲಿ ಜಯ ಸಾಧಿಸುವಿರಿ. ಆದರೆ ದಾಯಾದಿಗಳ ಅಸಮಾಧಾನಕ್ಕೆ ಕಾರಣವಾಗಬೇಕಾದೀತು. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments