Webdunia - Bharat's app for daily news and videos

Install App

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಶುಕ್ರವಾರ, 28 ಜೂನ್ 2019 (09:16 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ವಿನಾಕಾರಣ ದೂರುವ ನಿಮ್ಮ ವರ್ತನೆ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಇದರಿಂದ ಮನೆಯ ವಾತಾವರಣ ಹಾಳಾಗಬಹುದು. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಕೊಂಚ ಹಗುರವಾಗುವುದು. ಆರೋಗ್ಯದಲ್ಲಿ ಸುಧಾರಣೆ.

ವೃಷಭ: ಸಂಗಾತಿಯ ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಇಷ್ಟಮಿತ್ರರನ್ನು ಅನಿರೀಕ್ಷಿತವಾಗಿ ಭೇಟಿಯಾಗುವಿರಿ. ಆದಾಯವಿದ್ದಷ್ಟೇ ಖರ್ಚು ವೆಚ್ಚಗಳೂ ಹೆಚ್ಚುವುದು.

ಮಿಥುನ: ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚುವುದು. ಅವಿವಾಹಿತ ಸಹೋದರಿಯ ಮದುವೆ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಅರಸಿಕೊಂಡು ದೂರ ಪ್ರಯಾಣ ಮಾಡಬೇಕಾಗುತ್ತದೆ.

ಕರ್ಕಟಕ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬರುವುದು. ಹಿರಿಯರ ತೀರ್ಥ ಯಾತ್ರೆಗೆ ಸಿದ್ಧತೆ ಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ವ್ಯಾಪಾರಿಗಳಿಗೆ ನಿವ್ವಳ ಲಾಭ ಸಿಗಲಿದೆ.

ಸಿಂಹ: ಸಹೋದರರೊಂದಿಗೆ ಆಸ್ತಿ ವಿಚಾರದಲ್ಲಿ ವಾಗ್ವಾದವಾಗಬಹುದು. ಹಿರಿಯರ ಮಧ್ಯಸ್ಥಿಕೆ ವಹಿಸಿದರೆ ಉತ್ತಮ. ರಾಜಕೀಯವಾಗಿ ನಿಮ್ಮ ಸ್ಥಾನ ಮಾನ ಹೆಚ್ಚುವುದು. ಆದಾಯಕ್ಕೆ ಕೊರತೆಯಿರದು.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯಗಳಿರುವುದಾದರೂ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗುವಿರಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಸಂಗಾತಿಯ ಆಸೆ ಆಕಾಂಕ್ಷೆಗಳಿಗೆ ಕಿವಿಗೊಡಬೇಕಾಗುತ್ತದೆ.

ತುಲಾ: ನೂತನ ದಂಪತಿಗೆ ಮಧುಚಂದ್ರದ ಭಾಗ್ಯವಿದೆ. ಅವಿವಾಹಿತರಿಗೆ ಮನಸ್ಸಿಗೆ ಒಪ್ಪುವ ಸಂಬಂಧಗಳು ಕೂಡಿಬರಲಿವೆ. ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದವರಿಗೆ ಶುಭ ಫಲವಿದೆ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಶೈಕ್ಷಣಿಕ ವೃತ್ತಿಯಲ್ಲಿರುವವರಿಗೆ ಮುನ್ನಡೆ. ಕೃಷಿಕರಿಗೆ ನೀರಿಗಾಗಿ ಪರದಾಟ ತಪ್ಪದು. ಆರ್ಥಿಕವಾಗಿ ಕೊಂಚ ಮುಗ್ಗಟ್ಟು ಎದುರಿಸಬೇಕಾಗುತ್ತದೆ. ಆದರೆ ತಾಳ್ಮೆಯಿಂದಿದ್ದರೆ ಮುಂದೆ ಶುಭ ಫಲ ನಿರೀಕ್ಷಿಸಬಹುದು.

ಧನು: ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬದವರ ಅಸಮಾಧಾನಕ್ಕೆ ಕಾರಣವಾಗುವುದು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ದಾಯಾದಿಗಳೊಂದಿಗಿನ ಕಲಹ ಶಮನವಾಗುವುದು.

ಮಕರ: ಇದುವರೆಗೆ ಇದ್ದ ಕಷ್ಟ ಕಾರ್ಪಣ್ಯಗಳು ನಿಧಾನವಾಗಿ ದೂರವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಧನಾಗಮನಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಆದರೆ ಮಕ್ಕಳ ಭವಿಷ್ಯದ ವಿಚಾರದಲ್ಲಿ ಚಿಂತೆ ತಪ್ಪದು.

ಕುಂಭ: ಸ್ನೇಹಿತರ ಜತೆ ಪ್ರವಾಸ, ಇಷ್ಟ ಭೋಜನ ಮಾಡುವಿರಿ. ಆದರೆ ನಿಮ್ಮ ಸಲಹೆಗಳು ಸಂಗಾತಿಗೆ ಇಷ್ಟವಾಗದೇ ಇರಬಹುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ.

ಮೀನ: ಆಸ್ತಿ, ಲೆಕ್ಕ ಪತ್ರ ವಿಚಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ವಾಹನ ಸವಾರರಿಗೆ ಅಪಾಘಾತ ಭೀತಿಯಿದೆ. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗ ಸಿಗುವುದು. ಅವಿವಾಹಿತರು ಸೂಕ್ತ ಸಂಬಂಧಕ್ಕೆ ಕೆಲವು ದಿನ ಕಾಯಬೇಕಾಗಬಹುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments