ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಮಂಗಳವಾರ, 6 ಆಗಸ್ಟ್ 2019 (09:01 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಕ್ರಿಯಾತ್ಮಕ ಕೆಲಸಗಳ ಕಡೆಗೆ ಮನಸ್ಸು ವಾಲುವುದು. ನಿಮ್ಮ ಕೆಲವೊಂದು ಧೋರಣೆಗಳು ಸಂಗಾತಿಗೆ ಇಷ್ಟವಾಗದೇ ಹೋಗಬಹುದು. ಆದಷ್ಟು ತಾಳ್ಮೆಯಿಂದ ವ್ಯವಹರಿಸಿ. ಕೋಪದ ಕೈಗೆ ಬುದ್ಧಿ ಕೊಡಲು ಹೋದರೆ ಕಾರ್ಯ ಕೆಟ್ಟೀತು.

ವೃಷಭ: ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಗಮನಹರಿಸುವುದು ಒಳ್ಳೆಯದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ಚಿಂತೆ ಬೇಡ.

ಮಿಥುನ: ವೃಥಾ ಇಬ್ಬರ ಜಗಳದಲ್ಲಿ ಮೂಗು ತೂರಿಸಲು ಹೋಗಬೇಡಿ. ವ್ಯಾಜ್ಯಗಳಿಂದ ಆದಷ್ಟು ದೂರವಿರುವುದೇ ಒಳ್ಳೆಯದು. ಇಷ್ಟ ಮಿತ್ರರೊಂದಿಗೆ ಭೋಜನ ಮಾಡುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಆಪ್ತ ಮಿತ್ರರ ಸಂಕಷ್ಟಗಳಿಗೆ ಹೆಗಲು ಕೊಡುವಿರಿ. ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಆಶಾವಾದಿಗಳಾಗಿರಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ.

ಸಿಂಹ: ವಾಣಿಜ್ಯೋದ್ಯಮಿಗಳಿಗೆ ನಿರೀಕ್ಷಿತ ಲಾಭ ಕೈಹಿಡಿಯುವುದು. ರಾಜಕೀಯವಾಗಿ ಉತ್ತಮ ಸ್ಥಾನ ಮಾನ ಪಡೆಯುವಿರಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕುಲದೇವರ ಪ್ರಾರ್ಥನೆ ಮಾಡಿದರೆ ಶುಭ ಫಲ.

ಕನ್ಯಾ: ಸಂಗಾತಿಯ ಅಲಂಕಾರಿಕ ವಸ್ತುಗಳಿಗೆ ಹೆಚ್ಚಿನ ಧನವಿನಿಯೋಗ ಮಾಡಬೇಕಾಗುತ್ತದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ದಾಯಾದಿಗಳೊಂದಿಗೆ ಮನಸ್ತಾಪಗಳು ತಿಳಿಯಾಗುವುದು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ತುಲಾ: ದೈವಾನುಕೂಲದಿಂದ ನೀವು ಇಷ್ಟು ದಿನ ಕಷ್ಟವೆಂದು ಕೂತಿದ್ದ ಕೆಲಸಗಳು ಹೂವೆತ್ತಿದಂತೆ ಸುಗಮವಾಗಿ ನೆರವೇರುವುದು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಸಹೋದರಿಯಿಂದ ಶುಭ ವಾರ್ತೆ.

ವೃಶ್ಚಿಕ: ಆಲಸ್ಯತನಕ್ಕೆ ವಿರಾಮ ಹಾಕಿ ಕಷ್ಟಪಟ್ಟು ದುಡಿದರೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಸಿಗುವುದು. ಕೃಷಿ ಕ್ಷೇತ್ರದಲ್ಲಿರುವವರಿಗೆ ಕೊಂಚ ಹಿನ್ನಡೆಯಾಗಬಹುದು. ತಾಳ್ಮೆಗೆಡಬೇಡಿ.

ಧನು: ಮಾತಿನ ಮೇಲೆ ನಿಗಾ ವಹಿಸಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಹಿತಶತ್ರುಗಳು ನಿಮ್ಮ ಒಳ್ಳೆಯತನದ ದುರುಪಯೊಗಪಡಿಸಿಕೊಂಡಾರು. ಧನ ಲಾಭವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಮಕರ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗುವುದು ಉತ್ತಮ. ಆದಾಯ ದ್ವಿಗುಣವಾಗುವುದು.

ಕುಂಭ: ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಹಾಗಿದ್ದರೂ ನೀವು ಅಂದುಕೊಂಡ ಕೆಲಸಗಳು ನೆರವೇರುವುದರಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಬಂಧು ಮಿತ್ರರ ಆಗಮನವಾಗಲಿದೆ. ಖರ್ಚು ವೆಚ್ಚಗಳು ಹೆಚ್ಚುವುದು.

ಮೀನ: ಪ್ರೀತಿ ಪಾತ್ರರ ಕಷ್ಟಗಳಿಗೆ ಹೆಗಲುಕೊಡಬೇಕಾಗುತ್ತದೆ. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರವಹಿಸಿ. ಮಹಿಳಾ ಉದ್ಯೋಗಿಗಳಿಗೆ ಶುಭ ಫಲಗಳಿವೆ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

2026 ರಲ್ಲಿ ದ್ವಾದಶ ರಾಶಿಯವರಿಗೆ ಹಣಕಾಸಿನ ತೊಂದರೆ ಬರುತ್ತಾ, ಇಲ್ಲಿದೆ ವಿವರ

ಶುಕ್ರವಾರ ಓದಬೇಕಾದ ಲಕ್ಷ್ಮೀ ಮಂತ್ರ

ಮುಂದಿನ ಸುದ್ದಿ
Show comments