Webdunia - Bharat's app for daily news and videos

Install App

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಮಂಗಳವಾರ, 10 ಸೆಪ್ಟಂಬರ್ 2019 (08:52 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ತಾಳ್ಮೆ ಅಗತ್ಯ.

ವೃಷಭ: ಎಷ್ಟೋ ದಿನದಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡುವಿರಿ. ಆರ್ಥಿಕವಾಗಿ ಅಧಿಕ ಧನವ್ಯಯವಾಗಲಿದೆ. ಇಷ್ಟಮಿತ್ರರ ಭೇಟಿ ಸಾಧ್ಯತೆಯಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು.
ಮಿಥುನ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ವೃದ್ಧಿಯಾಗಲಿವೆ. ನೀವು ಮಾಡುವ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗುವುದು. ಪ್ರೀತಿ ಪಾತ್ರ ಮನೋಕಾಮನೆಗಳನ್ನು ಪೂರೈಸಲು ಮುಂದಾಗುವಿರಿ. ನಿರುದ್ಯೋಗಿಗಳಿಗೆ ಸರ್ಕಾರಿ ಉದ್ಯೋಗದ ಭಾಗ್ಯವಿದೆ.

ಕರ್ಕಟಕ: ಉದ್ಯೋಗದಲ್ಲಿ ನೀವು ಮಾಡುವ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯುವಿರಿ. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದರಿಂದ ಮನಸ್ಸಿಗೆ ಸಂತಸವಾಗುವುದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ ಎಚ್ಚರಿಕೆ ಅಗತ್ಯ.

ಸಿಂಹ: ರಾಜಕೀಯವಾಗಿ ಅಭಿವೃದ್ಧಿ ಹೊಂದುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ವಾಹನ ಸವಾರರಿಗೆ ಅಪಘಾತದ ಭೀತಿಯಿದೆ. ಎಚ್ಚರಿಕೆ ಅಗತ್ಯ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ದಿನದಂತ್ಯಕ್ಕೆ ಇದುವರೆಗೆ ಕೇಳಲು ಬಯಸಿದ್ದ ಸಂತಸದ ಸುದ್ದಿಯೊಂದನ್ನು ಕೇಳುವಿರಿ.

ಕನ್ಯಾ: ಸಂತಾನಹೀನ ದಂಪತಿಗಳಿಗೆ ಸಿಹಿ ಸುದ್ದಿಯೊಂದು ಕಾದಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ನೀವು ಅಂದುಕೊಂಡಂತೇ ನೆರವೇರಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುವುದು. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ತುಲಾ: ಆಸ್ತಿ ವಿವಾದಗಳಲ್ಲಿ ನಿಮಗೆ ಮೇಲುಗೈಯಾಗುವುದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ.

ವೃಶ್ಚಿಕ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸಂಗಾತಿಯ ಮನೋಕಾಮನೆ ಪೂರೈಸಲು ಧನವ್ಯಯಮಾಡಬೇಕಾಗುತ್ತದೆ. ವಾದ ವಿವಾದಲ್ಲಿ ಮೂಗು ತೂರಿಸಲು ಹೋಗಬೇಡಿ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ.

ಧನು: ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ವಾದ ವಿವಾದವಾಗಬಹುದು. ಹಿರಿಯರ ಮಧ್ಯಸ್ಥಿಕೆಗೆ ಬೆಲೆಕೊಡಿ. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ಸ್ವ ಉದ್ಯೋಗಿಗಳು ಆರ್ಥಿಕವಾಗಿ ಕೊಂಚ ಹಿನ್ನಡೆ ಅನುಭವಿಸುವರು. ಆದರೆ ತಾಳ್ಮೆ ಕಳೆದುಕೊಳ್ಳಬೇಕಾಗಿಲ್ಲ.

ಮಕರ: ಇಷ್ಟ ಮಿತ್ರರೊಂದಿಗೆ ಪ್ರವಾಸ, ಭೋಜನ ಸಾಧ್ಯತೆಯಿದೆ. ಆದರೆ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುವುದು. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿರಲಿ. ದೇವರ ಮೇಲೆ ಭಾರ ಹಾಕಿ ಹೊಸ ಕೆಲಸಗಳಿಗೆ ಕೈ ಹಾಕಿ.

ಕುಂಭ: ಕೌಟುಂಬಿಕವಾಗಿ ಆತಂಕ ತರುವ ಸುದ್ದಿಯೊಂದು ಕೇಳಿಬರಲಿದೆ. ಆತ್ಮಸ್ಥೈರ್ಯದಿಂದ ಮುನ್ನಡೆಯಬೇಕಾದ ಸಮಯವಿದು. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಧನವ್ಯಯವಾಗಲಿದೆ. ಉದ್ಯೋಗದಲ್ಲಿ ಮುನ್ನಡೆ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬರಬಹುದು.

ಮೀನ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾಗಬಹುದು. ಆದರೆ ತಾಳ್ಮೆ ಕಳೆದುಕೊಳ್ಳಬೇಕಾಗಿಲ್ಲ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಅಪವಾದದ ಭೀತಿಯಿದೆ. ಆರ್ಥಿಕವಾಗಿ ಸುಧಾರಣೆ ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments