Webdunia - Bharat's app for daily news and videos

Install App

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಮಂಗಳವಾರ, 24 ಸೆಪ್ಟಂಬರ್ 2019 (07:30 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಮನೆಯಲ್ಲಿ ನಿಮಗೆ ಅನುಕೂಲಕರವಾದ ವಾತಾವರಣವಿರಲಿದೆ. ನಿಮ್ಮ ಆಕಾಂಕ್ಷೆಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ಹೈರಾಣಾಗುವಿರಿ. ಆರ್ಥಿಕವಾಗಿ ಆದಾಯಕ್ಕೇನೂ ಕೊರತೆಯಾಗದು.

ವೃಷಭ: ಹೊಸ ವಸ್ತುಗಳ ಖರೀದಿಗೆ ಮನಸ್ಸು ಮಾಡುವಿರಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು.

ಮಿಥುನ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಫಲ ಸಿಗಲಿದೆ. ಪ್ರೇಮಿಗಳು ಮನೆಯವರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಸ್ತ್ರೀಯರಿಗೆ ಸಂತಾನ ಫಲ ಸೂಚನೆಗಳಿವೆ. ಸ್ವ ಉದ್ಯೋಗಿಗಳು ಲಾಭ ಪಡೆಯುವರು. ಅಧಿಕಾರಿ ವರ್ಗದವರಿಗೆ ಕಾರ್ಯದೊತ್ತಡವಿರಲಿದೆ.

ಕರ್ಕಟಕ: ವಿಪರೀತ ಯಾರನ್ನೂ ನಂಬಿ ವ್ಯವಹಾರ ಮಾಡಲು ಹೋಗಬೇಡಿ. ನಂಬಿಕೆ ದ್ರೋಹವೆಸಗುವವರು ನಿಮ್ಮ ಬೆನ್ನ ಹಿಂದೆಯೇ ಇರುತ್ತಾರೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಚಿಂತನೆ ನಡೆಸುವಿರಿ. ಸಹೋದರರಿಂದ ಕಿರಿ ಕಿರಿ ಇರಬಹುದು. ತಾಳ್ಮೆಯಿರಲಿ.

ಸಿಂಹ: ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಿಸುವಂತಹ ಘಟನೆಗಳು ನಡೆಯಲಿವೆ. ಸಂಗಾತಿಯ ಪ್ರೀತಿ ಸಂಪಾದಿಸುವಿರಿ. ಮಕ್ಕಳಿಂದ ಸಂತಸದ ವಾರ್ತೆ ಕೇಳಿಬರುವುದು. ಕೃಷಿಕರಿಗೆ ಕೊಂಚ ಹಿನ್ನಡೆಯಾದೀತು. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.

ಕನ್ಯಾ: ಆಸ್ತಿ ವಿಚಾರದಲ್ಲಿ ಕೋರ್ಟು ಮೆಟ್ಟಿಲೇರಿದ್ದರೆ ನಿಮ್ಮ ಪರವಾಗಿ ತೀರ್ಪು ಬರುವುದು. ದಾಯಾದಿಗಳೊಂದಿಗಿನ ಮನಸ್ತಾಪಗಳು ದೂರವಾಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನ. ವ್ಯವಹಾರದಲ್ಲಿ ಹೊಸ ಪ್ರಯತ್ನಕ್ಕೆ ಕೈಹಾಕುವಿರಿ. ಸಂಚಾರದಲ್ಲಿ ಜಾಗ್ರತೆಯಿಂದಿರಿ.

ತುಲಾ: ನಿರುದ್ಯೋಗಿಗಳು ಉದ್ಯೋಗ ವಿಚಾರವಾಗಿ ದೂರ ಸಂಚಾರ ಮಾಡಬೇಕಾಗಬಹುದು. ಸ್ವ ಉದ್ಯೋಗಿಗಳಿಗೆ ಲಾಭವಾಗಲಿದೆ. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ದೇಹಾರೋಗ್ಯದಲ್ಲಿ ಏರುಪೇರಾದೀತು. ಎಚ್ಚರಿಕೆ.

ವೃಶ್ಚಿಕ: ಕಳೆದು ಹೋಯಿತೆಂದು ಅಂದುಕೊಂಡಿದ್ದ ವಸ್ತುಗಳು ಮರಳಿ ಕೈಗೆ ಸಿಗುವುದು. ಅನಿರೀಕ್ಷಿತವಾಗಿ ಮನೆಗೆ ನೆಂಟರ ಆಗಮನವಾಗಲಿದೆ. ನೂತನ ದಂಪತಿಗಳಿಗೆ ಸಂತಾನ ಫಲ ಭಾಗ್ಯವಿದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ.

ಧನು: ಸಂಗಾತಿಯೊಂದಿಗೆ ದುಡುಕಿ ಮಾತನಾಡಿ ಮನಸ್ಸಿಗೆ ಬೇಸರ ಮಾಡುವಿರಿ. ತಾಳ್ಮೆಯಿಂದಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಕಂಡುಬರುವುದು. ಮನೆಗೆ ಹೊಸ ವಸ್ತುಗಳ ಖರೀದಿ ಮಾಡುವಿರಿ. ಶೈಕ್ಷಣಿಕ ರಂಗದಲ್ಲಿರುವವರಿಗೆ ಶುಭಫಲವಿದೆ.

ಮಕರ: ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ಮನಸ್ತಾಪವಾಗುವುದು. ಹಿರಿಯರ ಸಲಹೆಗಳಿಗೆ ಕಿವಿಗೊಡುವುದು ಸೂಕ್ತ. ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಗಳು ಕಾಡಬಹುದು. ದೇವಾಲಯ ಸಂದರ್ಶನ ಯೋಗವಿದೆ. ಕಿರು ಸಂಚಾರ ಯೋಗವಿದೆ.

ಕುಂಭ: ಮೈ ಕೈ ನೋವಿನಂತಹ ಆರೋಗ್ಯ ಸಮಸ್ಯೆಗಳು ಯಾತನೆ ಕೊಡುವುದು. ದೈನಂದಿನ ಕೆಲಸಗಳಿಗೆ ಅಡ್ಡಿ ಎದುರಾಗಬಹುದು. ಸಂಗಾತಿಯ ಕೆಲವು ನಿರ್ಧಾರಗಳು ಮನಸ್ಸಿಗೆ ಕಿರಿ ಕಿರಿ ಉಂಟುಮಾಡುತ್ತವೆ. ಇಷ್ಟಮಿತ್ರರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗುವುದು.

ಮೀನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಂದ ದೈನಂದಿನ ಕೆಲಸದಲ್ಲಿ ಆಲಸ್ಯತನ ಕಂಡುಬರುವುದು. ಮಹಿಳಾ ಉದ್ಯೋಗಿಗಳಿಗೆ ಶುಭಫಲಗಳಿವೆ. ಕ್ಷುಲ್ಲುಕ  ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ವಿದ್ಯಾರ್ಥಿಗಳಲ್ಲಿ ಆಲಸ್ಯತನ ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments