Select Your Language

Notifications

webdunia
webdunia
webdunia
webdunia

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ
ಬೆಂಗಳೂರು , ಮಂಗಳವಾರ, 9 ಜುಲೈ 2019 (08:39 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ದುಡುಕು ಮಾತಿನಿಂದ ಸಂಗಾತಿಯ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬೇಡಿ. ಆರ್ಥಿಕವಾಗಿ ನಾನಾ ಖರ್ಚುಗಳಿಗೆ ಕಡಿವಾಣ ಹಾಕಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಸಹೋದರರೊಂದಿಗೆ ಆಸ್ತಿ ಸಂಬಂಧವಾಗಿ ಕಿರಿ ಕಿರಿಯಾಗಬಹುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಜಯ ನಿಮ್ಮದಾಗುವುದು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಖರ್ಚಿನ ಬಗ್ಗೆ ನಿಗಾ ಇರಲಿ.

ಮಿಥುನ: ಸಂಗಾತಿಯ ಅಲಂಕಾರಿಕ ವಸ್ತುಗಳಿಗಾಗಿ ಖರ್ಚು ವೆಚ್ಚ ಮಾಡುವಿರಿ. ಸಹೋದರಿಯ ವಿವಾಹ ಸಂಬಂಧ ಓಡಾಟ ನಡೆಸಬೇಕಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಧಾರ್ಮಿಕ ಕೆಲಸಗಳಿಗಾಗಿ ಧನವಿನಿಯೋಗ ಮಾಡುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡುವಿರಿ. ವಾಹನ ಚಲಾಯಿಸುವಾಗ ಎಚ್ಚರವಿರಲಿ. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ.

ಸಿಂಹ: ಸ್ವ ಉದ್ಯೋಗಿಗಳು ಅಧಿಕ ಲಾಭ ಗಳಿಸುವರು. ನಿರುದ್ಯೋಗಿಗಳು ಪಾಲಿಗೆ ಬಂದಿದ್ದನ್ನು ಪಂಚಾಮೃತ ಎಂದು ಸ್ವೀಕರಿಸುವುದು ಒಳ್ಳೆಯದು. ಆಸ್ತಿ ವಿವಾದದಲ್ಲಿ ನಿಮಗೆ ಹಿನ್ನಡೆಯಾಗಬಹುದು. ತಾಳ್ಮೆಯಿಂದಿರಿ.

ಕನ್ಯಾ: ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನಸ್ಸಿಗೆ ಖುಷಿಯಾಗುವುದು. ದೂರ ಸಂಚಾರದಲ್ಲಿ ಕಳ್ಳತನದ ಭೀತಿಯಿದೆ. ಪ್ರೇಮಿಗಳಿಗೆ ಮನೆಯಲ್ಲಿ ಹಿರಿಯರಿಂದ ವಿರೋಧ ವ್ಯಕ್ತವಾಗಬಹುದು.

ತುಲಾ: ಹೊಸ ನಿರ್ಧಾರಗಳನ್ನು ಕೈಗೊಳ್ಳುವಾಗ ಸಂಗಾತಿಯೊಂದಿಗೆ ಸಮಾಲೋಚನೆ ನಡೆಸುವುದು ಒಳಿತು. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ತಲೆದೋರಬಹುದು. ವಾಹನ ಖರೀದಿಗೆ ಮುಂದಾಗುವಿರಿ. ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಮಹಿಳಾ ಉದ್ಯೋಗಿಗಳಿಗೆ ಶುಭ ಫಲವಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.

ಧನು: ಹೆಚ್ಚಿನ ಧನಾರ್ಜನೆಗೆ ನಾನಾ ಮೂಲಗಳನ್ನು ಕಂಡುಕೊಳ್ಳುವಿರಿ. ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರಬಹುದು. ಮನೆಯಲ್ಲಿ ಕಳ್ಳತನದ ಭೀತಿಯಿದೆ. ಎಚ್ಚರಿಕೆಯಿಂದಿರಿ. ಅಪರಿಚಿತರನ್ನು ನಂಬಿ ವ್ಯವಹರಾ ಮಾಡಬೇಡಿ.

ಮಕರ: ಅನಿರೀಕ್ಷಿತವಾಗಿ ಬರುವ ಬಂಧು ಮಿತ್ರರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ. ಶುಭ ಕಾರ್ಯಗಳನ್ನು ನೆರವೇರಿಸಲು ಓಡಾಟ ನಡೆಸುವಿರಿ. ಹೆಚ್ಚಿನ ಶುಭ ಫಲಗಳಿಗಾಗಿ ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಹೊಸ ವ್ಯವಹಾರಗಳಿಗೆ ಕೈ ಹಾಕುವಾಗ ಋಣಾತ್ಮಕ ಚಿಂತನೆಗಳು ಕಾಡಬಹುದು. ಆದರೆ ಆಲಸ್ಯತನದಿಂದ ಹಿಂದೇಟು ಹಾಕಬೇಡಿ. ನಿಮ್ಮ ಕೆಲಸಗಳಿಗೆ ಸಂಗಾತಿಯಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಚೇತರಿಕೆ ಕಾಣುವಿರಿ.

ಮೀನ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರೀಕ್ಷೆಗೆ ತಕ್ಕ ಫಲಿತಾಂಶ ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಏಳಿಗೆ ಕಂಡುಬರಲಿದೆ. ಆರ್ಥಿಕವಾಗಿಯೂ ನಿಧಾನವಾಗಿ ಚೇತರಿಕೆ ಕಂಡುಬರುವುದು. ಆದರೆ ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ಪಿತಪ್ಪಿಯೂ ದೇವರ ಪೂಜೆಗೆ ಈ ಹೂವನ್ನು ಬಳಸಬೇಡಿ