Select Your Language

Notifications

webdunia
webdunia
webdunia
webdunia

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ
ಬೆಂಗಳೂರು , ಮಂಗಳವಾರ, 27 ಆಗಸ್ಟ್ 2019 (08:39 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ತಾತ್ಕಾಲಿಕ ಉದ್ಯೋಗಿಗಳಿಗೆ ಹುದ್ದೆ ಖಾಯಂ ಆಗುವುದು. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರುತ್ತದೆ. ಆದರೆ ಅನಗತ್ಯ ವಿಚಾರಗಳಿಂದ ಮನಸ್ಸಿಗೆ ಗೊಂದಲ ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬರಬಹುದು. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದು ಮನಸ್ಸಿಗೆ ನೆಮ್ಮದಿಯಾಗುವುದು. ಸಾಂಸಾರಿಕವಾಗಿ ಕಷ್ಟದ ಸಮಯದಲ್ಲಿ ಸಂಗಾತಿಯಿಂದ ಸೂಕ್ತ ಸಲಹೆ ಸಿಗುವುದು. ನಿರುದ್ಯೋಗಿಗಳು ಕೆಲವು ದಿನ ಕಾಯಬೇಕಾಗುತ್ತದೆ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.

ಮಿಥುನ: ಕಾರ್ಯದೊತ್ತಡದಿಂದ ಮನಸ್ಸಿಗೆ ಬೇಸರ, ದೇಹ ಹೈರಾಣಾಗುವುದು. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಸಾಂಸಾರಿಕವಾಗಿ ಕೆಲವೊಂದು ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಖರ್ಚು ವೆಚ್ಚದ ಬಗ್ಗೆ ಕಾಳಜಿ ವಹಿಸಿ.

ಕರ್ಕಟಕ: ದೈವಾನುಕೂಲದಿಂದ ಇಂದು ನೀವು ಕೈ ಹಿಡಿದ ಕಾರ್ಯಗಳು ಸುಗಮವಾಗಿ ನೆರವೇರುವುದು. ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗುವುದು. ಕಾರ್ಯನಿಮಿತ್ತವಾಗಿ ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ.

ಸಿಂಹ: ವೃತ್ತಿರಂಗದಲ್ಲಿ ಒಂದಲ್ಲ ಒಂದು ರೀತಿಯ ಕಿರಿ ಕಿರಿ ತಪ್ಪದು. ಹಿತ ಶತ್ರುಗಳು ಬೆನ್ನ ಹಿಂದೆಯೇ ಇರುತ್ತಾರೆ. ಎಚ್ಚರಿಕೆಯಿಂದಿರಬೇಕಾಗುತ್ತದೆ. ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಂದ ಗೌರವ ಸಂಪಾದಿಸಲಿದ್ದೀರಿ. ಅಧಿಕಾರಿ ವರ್ಗದವರಿಗೆ ವರ್ಗಾವಣೆ ಭೀತಿಯಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಅಗತ್ಯ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ತುಲಾ: ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಮುನ್ನಡೆ ತೋರಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ತಯಾರಿ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ನಿರಾಸೆಯ ಸುದ್ದಿ ಕಾದಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರಕುವುದು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.

ವೃಶ್ಚಿಕ: ಹೆಚ್ಚಿನ ದೈವಾನುಕೂಲ ನಿಮ್ಮ ಮೇಲಿದ್ದು, ಆರ್ಥಿಕವಾಗಿ ಹಂತ ಹಂತವಾಗಿ ಚೇತರಿಕೆ, ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭ ಸೂಚಕ ಫಲ ದೊರೆಯಲಿದೆ. ಆರೋಗ್ಯದದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.

ಧನು: ನಿಮ್ಮ ಹಿತಶತ್ರುಗಳಿಂದಾಗಿ ಮಿತ್ರರೊಂದಿಗೆ ಕಲಹವಾದೀತು. ತಾಳ್ಮೆಯಿಂದಿರುವುದು ಮುಖ್ಯ. ಆರ್ಥಿಕವಾಗಿ ಸಕಾಲದಲ್ಲಿ ನೆರವು ದೊರಕುತ್ತದೆ. ಸಾಲಗಳು ಪಾವತಿಯಾಗಲಿವೆ. ನಿಮ್ಮ ಕ್ರಿಯಾಶೀಲತೆ ಪ್ರಶಂಸೆಗೊಳಗಾಗಲಿದೆ. ಆತ್ಮವಿಶ್ವಾಸದಿಂದ ಮುಂದುವರಿಯಿರಿ.

ಮಕರ: ಸಂಗಾತಿಯೊಂದಿಗಿದ್ದ ಮುನಿಸು ದೂರವಾಗುವುದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಆದರೆ ಅತಿಯಾಗಿ ಯಾರನ್ನೂ ನಂಬಲು ಹೋಗಬೇಡಿ. ಅವಿವಾಹಿತರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಭಾವುಕರಾಗಿ ಯೋಚನೆ ಮಾಡುವುದರಿಂದ ಮಾನಸಿಕವಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಸಂಗಾತಿಯೊಂದಿಗೆ ಮನಸ್ತಾಪಗಳಾಗಬಹುದು. ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡವಿರುತ್ತದೆ. ಆದರೆ ಎಲ್ಲವೂ ನಿಮ್ಮ ನಿರೀಕ್ಷೆಯಂತೇ ನಡೆಯುವುದರಿಂದ ಚಿಂತೆ ಬೇಡ.

ಮೀನ: ಸಾಮಾಜಿಕವಾಗಿ ಉನ್ನತ ಸ್ಥಾನ ತಲುಪಲಿದ್ದೀರಿ. ಸಾಂಸಾರಿಕ ಸಮಸ್ಯೆಗಳು ನಿವಾರಣೆಯಾಗಲಿವೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ಆಸ್ತಿ ವಿವಾದಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಪರ್ಸ್ ನ್ನು ಖರೀದಿಸಿದಾಗ ಹೀಗೆ ಮಾಡಿದರೆ ಹಣದ ಸಮಸ್ಯೆ ಹತ್ತಿರ ಸುಳಿಯಲ್ಲ