ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

Webdunia
ಗುರುವಾರ, 29 ಆಗಸ್ಟ್ 2019 (08:43 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಕೆಲವೊಂದು ನಿರ್ಧಾರ ತೆಗೆದುಕೊಳ್ಳುವುದರಲ್ಲಿ ಗೊಂದಲ ಕಾಡಲಿದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುವುದು. ಆರ್ಥಿಕವಾಗಿ ಚೇತರಿಕೆ ಇರಲಿದೆ.

ವೃಷಭ: ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗುವುದು. ಕೌಟುಂಬಿಕವಾಗಿ ಸಂತಸದ ದಿನವಾಗಲಿದೆ. ಆದರೆ ಕಾರ್ಯಕ್ಷೇತ್ರದಲ್ಲಿ ಕೆಲವೊಂದು ವಿಘ್ನಗಳು ಎದುರಾಗುತ್ತವೆ. ಹಾಗಿದ್ದರೂ ಕಾರ್ಯಸಾಧನೆಗೆ ಅಡ್ಡಿಯಾಗದು.
ಮಿಥುನ: ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ. ಕೌಟುಂಬಿಕವಾಗಿ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಸಾಧು ಸಜ್ಜನರ ಭೇಟಿ ಸಾಧ‍್ಯತೆಯಿದೆ. ದೈವಾನುಕೂಲದಿಂದ ಕೈ ಹಿಡಿದ ಕಾರ್ಯಗಳು ನಿರೀಕ್ಷಿತವಾಗಿ ನಡೆಯಲಿವೆ.

ಕರ್ಕಟಕ: ಸಾಮಾಜಿಕವಾಗಿ ಸ್ಥಾನ ಮಾನಗಳು ಹೆಚ್ಚಾಗಲಿವೆ. ವ್ಯಾಪಾರದಲ್ಲಿ ನಿವ್ವಳ ಲಾಭ ಸಿಗಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಸಿಂಹ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವಿರಿ. ಹಿರಿಯರಿಂದ ಬಂದ ವಸ್ತು ಕಳೆದುಹೋಗುವ ಸಂಭವಿದೆ. ಅಪರಿಚಿತರನ್ನು ನಂಬಿ ಮೋಸಹೋಗಬೇಡಿ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಿದ್ದರೂ ನಿಮ್ಮ ಸ್ಥಾನ ಮಾನಗಳು ಹೆಚ್ಚಾಗಲಿವೆ. ಸಂಗಾತಿಯ ಆಸೆ ನೆರವೇರಿಸಲು ಮುಂದಾಗುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹಿನ್ನಡೆಯಾಗಬಹುದು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ.

ತುಲಾ: ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಹೆಚ್ಚಿನ ಧನ ವ್ಯಯವಾದೀತು. ದಿನದಂತ್ಯಕ್ಕೆ ಅಚ್ಚರಿ ವಾರ್ತೆ ಕಾದಿದೆ.

ವೃಶ್ಚಿಕ: ಸಂತಾನ ಹೀನ ದಂಪತಿಗಳು ದೇವರ ಮೊರೆ ಹೋಗುವರು. ಸಂಗಾತಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ವಾಹನ ಸವಾರರಿಗೆ ಅಪಘಾತದ ಭೀತಿಯಿದೆ. ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳು ಸ್ವ ಉದ್ಯೋಗ ಮಾಡುವುದು ಒಳಿತು.

ಧನು: ಸರಕಾರಿ ಕೆಲಸಕ್ಕಾಗಿ ಕಾಯುತ್ತಿದ್ದ ನಿಮ್ಮ ಕಾಯುವಿಕೆಗೆ ಇಂದು ತೆರೆ ಬೀಳಲಿದೆ. ಇಷ್ಟ ಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಾಡಬಹುದು. ಸಹನೆ ಪರೀಕ್ಷಿಸುವಂತಹ ಘಟನೆಗಳು ನಡೆಯಲಿವೆ. ತಾಳ್ಮೆಯಿಂದಿರಿ.

ಮಕರ: ದುಡುಕಿನ ಮಾತನಾಡಿ ಸಂಗಾತಿಯ ಮನಸ್ಸಿಗೆ ಬೇಸರವುಂಟು ಮಾಡುವಿರಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂಧ ವ್ಯವಹರಿಸಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮಿಂದಾಗುವ ಕೆಲವು ಅನಿರೀಕ್ಷಿತ ತಪ್ಪುಗಳಿಗೆ ಮೇಲಧಿಕಾರಿಗಳ ಅಸಮಾಧಾನಕ್ಕೆ ಗುರಿಯಾಗುವಿರಿ.

ಕುಂಭ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯಾಗಲಿದೆ. ಅಧಿಕ ಓಡಾಟದಿಂದ ದೇಹಾಯಾಸವಾಗುವುದು. ಮಕ್ಕಳ ಭವಿಷ್ಯಕ್ಕಾಗಿ ಕೆಲವೊಂದು ನಿರ್ಧಾರ ಮಾಡುವಿರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ದೇವರ ಹರಕೆ ತೀರಿಸಲು ಮುಂದಾಗುವಿರಿ.

ಮೀನ: ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಮಾಡುವ ಯೋಗವಿದೆ. ಮಿತ್ರರ ಸಹಾಯಕ್ಕೆ ಮುಂದಾಗುವಿರಿ. ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಹಿರಿಯರ ಸಲಹೆಗೆ ಕಿವಿಗೊಡಿ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಮುಂದಿನ ಸುದ್ದಿ
Show comments