Select Your Language

Notifications

webdunia
webdunia
webdunia
webdunia

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ
ಬೆಂಗಳೂರು , ಮಂಗಳವಾರ, 17 ಸೆಪ್ಟಂಬರ್ 2019 (08:59 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಸಂಗಾತಿಯ ಮನೋಕಾಮನೆ ಪೂರೈಸಲು ಹೆಚ್ಚಿನ ಧನವ್ಯಯಮಾಡಬೇಕಾಗುತ್ತದೆ. ಹಿರಿಯರ ಮಾತಿಗೆ ಕಿವಿಗೊಡಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹ ಹೈರಾಣಾಗುವುದು. ಮನೆ ಬದಲಾವಣೆಗೆ ಚಿಂತನೆ ಮಾಡುವಿರಿ.

ವೃಷಭ: ಆರ್ಥಿಕವಾಗಿ ಇದುವರೆಗೆ ಇದ್ದ ಹಣಕಾಸಿನ ಕಷ್ಟಗಳು ನಿವಾರಣೆಯಾಗಿ ನಿಧಾನವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಿರಿ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾಗಬಹುದು ಎಚ್ಚರಿಕೆ ಅಗತ್ಯ.

ಮಿಥುನ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಉತ್ತಮ ಜನಮನ್ನಣೆ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ನೂತನ ದಂಪತಿಗಳಿಗೆ ಸಂತಾನ ಫಲ ಸೂಚನೆ ಸಿಗಲಿದೆ. ಮಿತ್ರರ ಭೇಟಿ ಮನಸ್ಸಿಗೆ ಸಂತಸವಾಗುವುದು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರ.

ಕರ್ಕಟಕ: ಕೂಡಿಟ್ಟ ಹಣ ಖರ್ಚು ಮಾಡಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿಗೆ ಪರದಾಡುವಂತಾಗುತ್ತದೆ. ಅಧಿಕ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸುವಿರಿ. ಕೌಟುಂಬಿಕವಾಗಿ ಪ್ರೀತಿ ಪಾತ್ರರ ಆಸೆ ನೆರೆವೇರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ  ಅಗತ್ಯ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನಗಳು ವೃದ್ಧಿಯಾಗಲಿವೆ. ಜನರ ಮೆಚ್ಚುಗೆಗೆ ಪಾತ್ರವಾಗಲಿದ್ದೀರಿ. ಸಾಂಸಾರಿಕವಾಗಿ ನಿಮ್ಮೆ ಕೆಲವೊಂದು ನಿರ್ಧಾರಗಳು ಸಂಗಾತಿಗೆ ಹಿಡಿಸದೇ ಹೋಗಬಹುದು. ತಾಳ್ಮೆಯಿಂದಿರುವುದು ಮುಖ್ಯ.

ಕನ್ಯಾ: ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಮನೆಯಲ್ಲಿ ಕಳ್ಳತನದ ಭೀತಿಯಿದೆ. ವಾಹನ ಸವಾರರು ಎಚ್ಚರವಾಗಿರಬೇಕು.

ತುಲಾ: ಇಷ್ಟ ಮಿತ್ರರ ಭೇಟಿ, ಭೋಜನ ಮನಸ್ಸಿಗೆ ಖುಷಿ ಕೊಡಲಿದೆ. ಆದರೆ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊಂಚ ಹಿನ್ನಡೆಯಾಗಬಹುದು. ಹಾಗಿದ್ದರೂ ನಿರಾಸೆ ಬೇಡ. ಕುಲದೇವರ ಪ್ರಾರ್ಥನೆ ನಡೆಸಿ.

ವೃಶ್ಚಿಕ: ಉದ್ಯೋಗ ನಿಮಿತ್ತ ವಿದೇಶಯಾನದ ಯೋಗವಿದೆ. ಹೊಸ ವಸ್ತು, ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಮಾಡುವಿರಿ. ಮನೆಯಲ್ಲಿ ಶುಭಮಂಗಲ ಕಾರ್ಯ ನೆರವೇರಿಸಲು ಚಿಂತನೆ ನಡೆಸುವಿರಿ.

ಧನು: ಸಹೋದರರೊಂದಿಗೆ ಆಸ್ತಿ ವಿಚಾರವಾಗಿ ಕಿರಿ ಕಿರಿಯಾಗಬಹುದು. ಹಿರಿಯರ ಮಧ್ಯಸ್ಥಿಕೆಗೆ ಪ್ರಾಮುಖ್ಯತೆ ಕೊಡಿ. ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ವಿದ್ಯಾರ್ಥಿಗಳಿಗೆ ಆಲಸ್ಯತನ ಕಂಡುಬರಬಹುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಮಕರ: ಸುಲಭವಾಗಿ ಕೈಗೆ ಸಿಕ್ಕಿದ ವಸ್ತು ಅಷ್ಟೇ ಸುಲಭವಾಗಿ ಕೈಜಾರಿದ ಅನುಭವವಾಗಲಿದೆ. ಸಂಗಾತಿಯೊಂದಿಗೆ ದುಡುಕಿ ಮಾತನಾಡಿ ಪಶ್ಚಾತ್ತಾಪ ಪಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸವಿರಲಿದೆ. ಹಾಗಿದ್ದರೂ ನಿಮ್ಮ ಮುನ್ನಡೆಯನ್ನು ಯಾರೂ ತಡೆಯಲಾಗದು.

ಕುಂಭ: ಮಕ್ಕಳ ಭವಿಷ್ಯದ ನಿಮಿತ್ತ ಹಲವು ಯೋಜನೆಗಳನ್ನು ಜಾರಿಗೆ ತರಬೇಕಾಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆ ತೋರಿಬರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ಕಾಳಜಿವಹಿಸುವುದು ಮುಖ್ಯ. ಹೊಸ ಜನರ ಭೇಟಿಯಿಂದ ಕಾರ್ಯಸಾಧನೆಯಾಗುವುದು.

ಮೀನ: ಮಹಿಳಾ ಉದ್ಯೋಗಿಗಳಿಗೆ ಹೆಚ್ಚಿನ ಶುಭ ಫಲಗಳಿವೆ. ಇಷ್ಟ ಮಿತ್ರರು ಕಷ್ಟದ ಸಂದರ್ಭದಲ್ಲಿ ನೆರವಾಗುವರು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುವುದು. ಕೌಟುಂಬಿಕವಾಗಿ ನೆಮ್ಮದಿಯ ದಿನವಾಗಿರಲಿದೆ. ದೇವತಾ ಪ್ರಾರ್ಥನೆ ಮಾಡುವುದನ್ನು ಮರೆಯಬೇಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಲ್ಲಿ ಪೊರಕೆಯನ್ನು ಇಟ್ಟರೆ ಮಹಾಲಕ್ಷ್ಮೀಯ ಶಾಪಕ್ಕೆ ಗುರಿಯಾಗುತ್ತೀರಿ