Select Your Language

Notifications

webdunia
webdunia
webdunia
webdunia

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ
ಬೆಂಗಳೂರು , ಗುರುವಾರ, 26 ಸೆಪ್ಟಂಬರ್ 2019 (09:04 IST)
ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.


ಮೇಷ: ಆರೋಗ್ಯ ಸಮಸ್ಯೆ ನಿಮ್ಮ ಚಿಂತೆ ಹೆಚ್ಚಿಸುವುದು. ಸಂಗಾತಿಯ ಸಹಕಾರ ಸಿಗಲಿದೆ. ಆದರೆ ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಮನೆಗೆ ಹೊಸ ವಸ್ತುಗಳ ಖರೀದಿ ಮಾಡುವಿರಿ. ವಾಹನ ಸಂಚಾರ ಮಾಡುವಾಗ ಎಚ್ಚರಿಕೆಯಿಂದಿರಿ.

ವೃಷಭ: ಸರಕಾರಿ ಕೆಲಸಗಳಲ್ಲಿ ಜಯ, ಮುನ್ನಡೆ ಗಳಿಸುವಿರಿ. ಹಿರಿಯರ ತೀರ್ಥ ಯಾತ್ರೆಗೆ ತಯಾರಿ ನಡೆಸುವಿರಿ. ಮನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆಯಿಂದಿರಿ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಮುದ ನೀಡುವುದು. ದೇವತಾ ಪ್ರಾರ್ಥನೆ ಮರೆಯದಿರಿ.

ಮಿಥುನ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ, ಪ್ರಶಂಸೆ ವ್ಯಕ್ತವಾಗುವುದು. ಕಲಾ ಕ್ಷೇತ್ರದಲ್ಲಿರುವವರು ಕೀರ್ತಿ ಸಂಪಾದಿಸುವರು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರ. ವ್ಯವಹಾರದಲ್ಲಿ ಲಾಭ ಗಳಿಸುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ಕರ್ಕಟಕ: ಪ್ರೀತಿ ಪಾತ್ರರಿಗಾಗಿ ಕೆಲವೊಂದು ಮನಸ್ಸಿಗೆ ಹಿಡಿಸದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಬಂಧು ಮಿತ್ರರ ಆಗಮನವಾಗಲಿದೆ. ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಉದ್ಯೋಗ ಕ್ಷೇತ್ರದಲ್ಲಿ ಕೆಳ ಹಂತದ ನೌಕರರಿಗೆ ಬಡ್ತಿ, ವೇತನ ಹೆಚ್ಚಳ ಯೋಗವಿದೆ.

ಸಿಂಹ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮಹಿಳೆಯರಿಂದ  ಅಪವಾದದ ಭೀತಿಯಿದೆ. ಹಿತ ಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ಆದರೆ ಹಿರಿಯರಿಂದ ಬರಬೇಕಾದ ವಸ್ತು, ಆಸ್ತಿ ನಿಮ್ಮ ಕೈ ಹಿಡಿಯುವುದು.

ಕನ್ಯಾ: ಕೌಟುಂಬಿಕವಾಗಿ ನೆಮ್ಮದಿಯ ದಿನಗಳಿವು. ಇಷ್ಟ ಮಿತ್ರರ ಭೇಟಿ, ಭೋಜನ ಸಾಧ‍್ಯತೆಯಿದೆ. ಆದರೆ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಕ್ಕಳಿಂದ ಸಂತಸದ ವಾರ್ತೆ ಸಿಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಹಿನ್ನಡೆಯಾಗಬಹುದು. ತಾಳ್ಮೆ ಕಳೆದುಕೊಳ್ಳಬೇಡಿ.

ತುಲಾ: ಎಷ್ಟೋ ದಿನದಿಂದ ಕಾಡುತ್ತಿದ್ದ ಸಮಸ್ಯೆಗೆ ಅಂತ್ಯ ಕಂಡುಕೊಳ್ಳುವಿರಿ. ಮನಸ್ಸಿಗೆ ನೆಮ್ಮದಿ ಇರುವುದು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಚಿಂತನೆ ನಡೆಸುವಿರಿ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು.

ವೃಶ್ಚಿಕ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಬೇಕು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದಲೇ ಅಸಹಕಾರ. ಆದರೆ ನಿಮ್ಮ ಮುನ್ನಡೆಯನ್ನು ಯಾರಿಂದಲೂ ತಡೆಯಲಾಗದು. ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡುವಿರಿ.

ಧನು: ಮಾತಿನ ಮೇಲೆ ನಿಗಾ ಇರಲಿ. ದುಡುಕಿನ ಮಾತಿನಿಂದ ಸಂಗಾತಿಯ ಮನ ನೋಯಿಸುವಿರಿ. ಈ ದಿನ ಯಾರಿಗೂ ಸಾಲ ಕೊಡಲು ಹೋಗಬೇಡಿ. ಅಪರಿಚಿತ ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಮಕರ: ಈ ದಿನ ದೈವಾನುಕೂಲ ನಿಮ್ಮ ಮೇಲಿದ್ದು, ಅಂದುಕೊಂಡ ಕೆಲಸಗಳನ್ನು ನಿರ್ವಿಘ್ನವಾಗಿ ನೆರವೇರಿಸುವಿರಿ. ಆರ್ಥಿಕವಾಗಿ ಹಣಕಾಸಿಗೆ ಯಾವುದೇ ತೊಂದರೆ ಇರಲ್ಲ. ಸಂಗಾತಿಯ ಮನೋಕಾಮನೆ ಪೂರೈಸುವಿರಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಕುಂಭ: ಸಣ್ಣ ಪುಟ್ಟ ವಿಚಾರಗಳಿಗೆ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುತ್ತೀರಿ. ಪ್ರೀತಿ ಪಾತ್ರರ ಸಂತೃಪ್ತಿಗೊಳಿಸಲು ಹಣ ನೀರಿನಂತೆ ಖರ್ಚು ಮಾಡುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ. ಅವಿವಾಹಿತರಿಗೆ ಹೊಸ ವಿವಾಹ ಪ್ರಸ್ತಾಪಗಳು ಬರಲಿವೆ.

ಮೀನ: ಶಾರೀರಿಕವಾಗಿ ಆರೋಗ್ಯ ಸುಧಾರಿಸಿದರೂ ಮಾನಸಿಕವಾಗಿ ಯಾವುದೋ ಬೇಡದ ಚಿಂತೆಗಳಿಂದ ಕೆಲಸದ ಮೇಲೆ ನಿರಾಸಕ್ತಿ ಉಂಟಾಗಬಹುದು. ನೂತನ ದಂಪತಿಗಳಿಗೆ ಪ್ರವಾಸ ಭಾಗ್ಯವಿದೆ. ಶುಭ ಮಂಗಲ ಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ತುಲಾ ರಾಶಿಯ ಪ್ರೇಮಿಯ ಸ್ವಭಾವ ಹೇಗಿರುತ್ತದೆ?