Webdunia - Bharat's app for daily news and videos

Install App

ಆರೋಗ್ಯ ಮತ್ತು ಶ್ರೀಮಂತಿಕೆ ಪಡೆಯಲು ವಿಶೇಷ ವಾಸ್ತು ಟಿಪ್ಸ್

Webdunia
ಮಂಗಳವಾರ, 27 ಸೆಪ್ಟಂಬರ್ 2016 (14:22 IST)
ಕಸ ಗುಡಿಸುವ ಪೊರಕೆಗಳನ್ನು ಕಣ್ಣಿನಿಂದ ಮರೆಯಾಗುವಂತೆ ಮ‌ೂಲೆಯಲ್ಲಿ ತಲೆಕೆಳಗಾಗಿ ಇಡುವುದರಿಂದ ಕುಟುಂಬದ ಜೀವನ ತೊಳೆದುಹೋಗದಂತೆ ತಪ್ಪಿಸುತ್ತದೆ.
* ಸ್ನಾನದ ಗೃಹ ಅಥವಾ ಅಡುಗೆ ಮನೆಯ ನಲ್ಲಿಗಳಲ್ಲಿ ನೀರು ತೊಟ್ಟಿಕ್ಕದಂತೆ ಖಾತರಿ ಮಾಡಿಕೊಳ್ಳಿ.ಸತತ ನೀರಿನ ತೊಟ್ಟಿಕ್ಕುವಿಕೆಯು ನಕಾರಾತ್ಮಕ ಶಕ್ತಿಯನ್ನು ಸೂಸುವುದರಿಂದ ನೀರಿನ ತೊಟ್ಟಿಕ್ಕುವಿಕೆಯು ಸಂಪತ್ತಿನ ಸೋರುವಿಕೆಯನ್ನು ಸಂಕೇತಿಸುತ್ತದೆ.
 
* ಸ್ವಚ್ಛವಾದ ಡೆಸ್ಕ್ ಸ್ಪಷ್ಟ ಯೋಚನೆಗೆ ಪ್ರೋತ್ಸಾಹಿಸುತ್ತದೆ. ಇದು ಆರ್ಥಿಕ ಶಕ್ತಿ ಮತ್ತು ಸೃಜನಶೀಲತೆಯನ್ನು ಸಂಕೇತಿಸುತ್ತದೆ. ಕಂಪ್ಯೂಟರ್, ಫೋನ್ ಮುಂತಾದುವನ್ನು ಡೆಸ್ಕ್‌ನಲ್ಲಿ ಬಳಸಬಹುದು.
 
* ಎಲ್ಲ ಗಡಿಯಾರಗಳು ಸುಸ್ಥಿತಿಯಲ್ಲಿ ಇರಬೇಕು. ಕಾರ್ಯನಿರ್ವಹಿಸದ ಗಡಿಯಾರವು ಹಣಕಾಸು ಸ್ಥಿತಿ ಸುಧಾರಿಸದೇ ಅಲ್ಲೇ ನಿಲ್ಲುವಂತೆ ಮಾಡುತ್ತದೆ. ನಿಧಾನ ಗಡಿಯಾರದಿಂದ ನಿಮ್ಮ ಕೆಲಸಗಳು ವಿಳಂಬವಾಗುತ್ತದೆ.
 
* ನಿಮ್ಮ ಮಲಗುವ ಕೋಣೆಯ ಕಿಟಕಿಗಳನ್ನು ಕನಿಷ್ಠ 20 ನಿಮಿಷಗಳ ಕಾಲ ತೆರೆದು ಹೊಸ ಗಾಳಿ ಒಳಪ್ರವೇಶಕ್ಕೆ ಅವಕಾಶ ನೀಡಿ. ಇಲ್ಲದಿದ್ದರೆ ಪ್ರತಿ ರಾತ್ರಿ ನೀರಸ ಗಾಳಿಯೊಂದಿಗೆ ನೀವು ಮಲಗಬೇಕಾಗುತ್ತದೆ. ಅದಕ್ಕೆ ಅವಕಾಶ ನೀಡಿದರೆ, ಜೀವನದಲ್ಲಿ ಉತ್ತಮ ಅದೃಷ್ಟವನ್ನು ನೀವು ಹೇಗೆ ನಿರೀಕ್ಷಿಸುತ್ತೀರಿ? 
 
* ನೆಲದಿಂದ ಒಂದು ಅಡಿ ಎತ್ತರದಲ್ಲಿ ಹಾಸಿಗೆಯಿರಬೇಕು. ಇದರಿಂದ ನೆಲದಲ್ಲಿ ಮುಕ್ತವಾಗಿ ಶಕ್ತಿ ಹರಿಯಲು ಅವಕಾಶ ಕಲ್ಪಿಸುತ್ತದೆ. ಶಕ್ತಿಯ ಮುಕ್ತ ಹರಿಯುವಿಕೆ ತಡೆದರೆ ನಿಮ್ಮ ಸಂಪತ್ತು ಗಳಿಸುವ ಅವಕಾಶ ಕೂಡ ಮೊಟಕಾಗುತ್ತದೆ.
 
* ತಲೆಯ ಹಿಂಭಾಗದಲ್ಲಿ ಭದ್ರಗೋಡೆಯೊಂದಿಗೆ ಮಲಗಿ. ಈ ಸ್ಥಿತಿಯು ನೀವು ಮಾಡುವ ಕೆಲಸದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ತಲೆಯ ಹಿಂಭಾಗದಲ್ಲಿ ಕಿಟಕಿಗಳು ಮತ್ತು ಬಾಗಿಲಿಗೆ ಅವಕಾಶ ಕೊಡಬಾರದು.
 
* ನೆಲವನ್ನು ಮನೆಯ ಒಳಗೆ ಗುಡಿಸಿಕೊಂಡು ಹೋಗಬೇಕು. ಮುಖ್ಯ ದ್ವಾರದತ್ತ ಕಸ ಗುಡಿಸುವುದರಿಂದ ಸಂಪತ್ತು ಕ್ಷೀಣಿಸುತ್ತದೆ.
 
* ಕಸದ ಬುಟ್ಟಿಗಳನ್ನು ಸದಾ ಮುಚ್ಚಿರಬೇಕು. ಇಲ್ಲದಿದ್ದರೆ ಸಂಪತ್ತಿನ ಶಕ್ತಿಯ ಭ್ರಷ್ಟತೆಗೆ ದಾರಿಕಲ್ಪಿಸುತ್ತದೆ.
 
* ಮನೆಯ ಮುಖ್ಯದ್ವಾರದಲ್ಲಿ ಚಪ್ಪಲಿಗಳನ್ನು ಚೆಲ್ಲಾಪಿಲ್ಲಿಯಾಗಿ ಹರಡಬಾರದು. ಮುಖ್ಯದ್ವಾರದಲ್ಲಿ ಮುಕ್ತ ಮತ್ತು ಸ್ವಚ್ಛ ಜಾಗವಿರಬೇಕು. ಇಲ್ಲದಿದ್ದರೆ ಗಾಳಿಯೊಂದಿಗೆ ಹರಿಯುವ ಶಕ್ತಿಯು ಬೂಟುಗಳು ಮತ್ತು ಚಪ್ಪಲಿಗಳ ವಾಸನೆಯೊಂದಿಗೆ ಮಿಶ್ರಣಗೊಂಡು ಮನೆಯಲ್ಲಿ ನಷ್ಟಗಳು ಪ್ರಾಪ್ತವಾಗುತ್ತದೆ.
 
* ತೊಳೆಯದ ಪಾತ್ರೆಗಳನ್ನು ಸಿಂಕ್‌ನಲ್ಲಿ ಹಾಗೇ ಬಿಡದೇ ಆದಷ್ಟು ಬೇಗ ತೊಳೆಯುವುದು ಒಳ್ಳೆಯದು. ತಕ್ಷಣವೇ ತೊಳೆಯದಿರುವುದು ಅಪೂರ್ಣತೆಯ ಸಂಕೇತವಾಗಿದ್ದು, ಹಣಕಾಸು ಪರಿಸ್ಥಿತಿಯ ಅವ್ಯವಸ್ಥೆಗೆ ಪುರಾವೆ ಒದಗಿಸುತ್ತದೆ.
 
* ಮುಖ್ಯ ಪ್ರವೇಶದ್ವಾರದ ಮೇಲೆ ಶೌಚಾಲಯಗಳು ಇರಬಾರದು. ಅದು ನಕಾರಾತ್ಮಕ ಶಕ್ತಿಯನ್ನು ಸೂಸುತ್ತದೆ. ಇದು ಮುಖ್ಯದ್ವಾರದಿಂದ ಪ್ರವೇಶಿಸುವ ನಕಾರಾತ್ಮಕ ಶಕ್ತಿಗೆ ಹಸ್ತಕ್ಷೇಪ ಉಂಟುಮಾಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

Vishnu Mantra: ಶ್ರೀ ವಿಷ್ಣು ಅಷ್ಟೋತ್ತರ ನಾಮಾವಳಿ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಓದಿ

Lakshmi Mantra: ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟಿರಲಿದೆ ಎಂದು ವರದಿಗಳು ಹೇಳುತ್ತಿವೆ.

ಮುಂದಿನ ಸುದ್ದಿ
Show comments