Webdunia - Bharat's app for daily news and videos

Install App

ದೇವರಿಗೆ ತೆಂಗಿನ ಕಾಯಿ ಮತ್ತು ಬಾಳೆಹಣ್ಣನ್ನು ಮಾತ್ರವೇ ನೈವೇದ್ಯ ಮಾಡುವುದೇಕೆ?

Webdunia
ಮಂಗಳವಾರ, 5 ಫೆಬ್ರವರಿ 2019 (08:58 IST)
ಬೆಂಗಳೂರು: ಸಾಮಾನ್ಯವಾಗಿ ದೇವರ ಪೂಜೆಗೆ ತೆಂಗಿನ ಕಾಯಿ ಮತ್ತು ಬಾಳೆ ಹಣ್ಣು ಇಡುವುದನ್ನು ತಪ್ಪಿಸುವುದಿಲ್ಲ. ಆದರೆ ಇವೆರಡೂ ದೇವರಿಗೆ ಶ್ರೇಷ್ಠ ಯಾಕೆ ಗೊತ್ತಾ?


ದೇವಸ್ಥಾನಕ್ಕೆ ಹೋಗುವಾಗ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನು ತಪ್ಪದೇ ತೆಗೆದುಕೊಂಡು ಹೋಗುತ್ತೇವೆ. ಬೇರೆ ಯಾವ ಹಣ್ಣನ್ನೂ ತೆಗೆದುಕೊಂಡು ಹೋಗುವುದಿಲ್ಲ ಯಾಕೆ ಗೊತ್ತಾ?

ಪೂಜೆಗಳಲ್ಲಿ ಹೂವು ನೈವೇದ್ಯದ ಪದಾರ್ಥಗಳು, ಪತ್ರೆಗಳಲ್ಲಿ ಕೊಡ ಭಿನ್ನತೆಯಿರುವಾಗ ಎಲ್ಲಾ ದೇವರಿಗೂ ಬಾಳೆಹಣ್ಣನ್ನು ನಿವೇದಿಸುತ್ತಾರೆ. ಹಾಗೆಯೇ ತೆಂಗಿನ ಕಾಯಿ ಒಡೆದು ಮಂಗಳಾರತಿ ಬೆಳಗುತ್ತಾರೆ.

ಹೆಚ್ಚಾಗಿ ನಾವು ಒಂದು ಹಣ್ಣನ್ನು ತಿಂದು ಬೀಜವನ್ನು ಎಸೆದಾಗ ಅಥವಾ ಪಕ್ಷಿ, ಮೈಗಗಳ ಮೂಲಕ ಎಲ್ಲಿಯಾದರೂ ಬಿದ್ದಾಗ ಅವು ಮೊಳಕೆಯೊಡೆದು ಗಿಡವಾಗುತ್ತದೆ.ಆದರೆ ಬಾಳೆಹಣ್ಣನ್ನು ಸುಲಿದು ಸಿಪ್ಪೆಯಾಗಿ ಅಥವಾ ಇಡೀ ಬಾಳೆಹಣ್ಣನ್ನೇ ಹಾಗೇ ಎಸೆದರೂ ಅದು ಮತ್ತೆ ಬೆಳೆಯುವುದಿಲ್ಲ. ತೆಂಗಿನ ಕಾಯಿಯೂ ಅಷ್ಟೇ.

ಹಾಗೆಯೇ ಈ ಜನ್ಮವನ್ನು ಮುಗಿಸಿಬಿಟ್ಟರೆ ಮತ್ತೆ ಜನ್ಮವಿಲ್ಲದ ಮುಕ್ತಿಯನ್ನು ಭಗವಂತನಲ್ಲಿ ಬೇಡುವುದಕ್ಕಾಗಿಯೇ ಇವೆರಡನ್ನೂ ನೈವೇದ್ಯ ಮಾಡುವ ಪದ್ಧತಿಯನ್ನು ನಮ್ಮ ಹಿರಿಯರು ಮಾಡಿದ್ದಾರೆ. ತೆಂಗಿನ ಕಾಯಿ ದೇವರ ಮುಂದೆ ಒಡೆದರೆ ನಮ್ಮ ಪಾಪ ಕರ್ಮ ದೋಷವೂ ಪರಿಹಾರವಾಗುತ್ತದೆ ಎಂಬ ನಂಬಿಕೆಯಿದೆ. ಅದೇ ಕಾರಣಕ್ಕೆ ಇವೆರಡನ್ನೂ ನೈವೇದ್ಯ ಮಾಡುವುದು ಶ್ರೇಷ್ಠವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ಅಂದುಕೊಂಡ ಕೆಲಸವಾಗಬೇಕಾದರೆ ಆಂಜನೇಯನ ಈ ಮಂತ್ರ ಹೇಳಿ

ಗ್ರಹಗತಿಗಳ ಸಮಸ್ಯೆಯಿದ್ದಲ್ಲಿ ಈ ಸ್ತೋತ್ರವನ್ನು ತಪ್ಪದೇ ಓದಿ

ಆಂಜನೇಯ ಅಷ್ಟಕಂ ಕನ್ನಡದಲ್ಲಿ ಇಲ್ಲಿದೆ ಈ ದೋಷವಿರುವವರು ತಪ್ಪದೇ ಓದಿ

ಜೀವನದಲ್ಲಿ ಶಾಂತಿ, ಮೋಕ್ಷ ಪ್ರಾಪ್ತಿಯಾಗಲು ಆದಿಲಕ್ಷ್ಮಿಯ ಈ ಸ್ತೋತ್ರ ಓದಿ

ಲಕ್ಷ್ಮೀ ನರಸಿಂಹ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments