Webdunia - Bharat's app for daily news and videos

Install App

ಆಯೋಧ್ಯೆ ರಾಮ ಮಂದಿರ; 2023ಕ್ಕೆ ಸಾರ್ವಜನಿಕರಿಗೆ ಮುಕ್ತ!

Webdunia
ಗುರುವಾರ, 5 ಆಗಸ್ಟ್ 2021 (09:00 IST)
ಅಯೋಧ್ಯೆ(ಆ.05): ಶತಮಾನಗಳಿಂದ ಆಯೋಧ್ಯೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಲು ಕಾಯುತ್ತಿರುವ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಮ ಮಂದಿರ ಕಾಮಗಾರಿ ಭರದಿಂದ ಸಾಗುತ್ತಿದ್ದು, 2023ರ ಡಿಸೆಂಬರ್ ತಿಂಗಳಲ್ಲಿ ರಾಮ ಮಂದಿರ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಪಷ್ಟಪಡಿಸಿದೆ.

ರಾಮ ಮಂದಿರ, ಕಾಂಪ್ಲೆಕ್ಸ್, ಮ್ಯೂಸಿಯಂ ಸೇರಿದಂತೆ ಎಲ್ಲಾ ಕಾಮಗಾರಿಗಳು 2025ಕ್ಕೆ ಪೂರ್ಣಗೊಳ್ಳಲಿದೆ. 2023ರಿಂದ ಸಾರ್ವಜನಿಕರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ಟ್ರಸ್ಟ್ ಹೇಳಿದೆ. 2020ರ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು. ಬರೋಬ್ಬರಿ 1,000 ಕೋಟಿ ವೆಚ್ಚದಲ್ಲಿ ರಾಮ ಮಂದಿರ ನಿರ್ಮಾಣವಾಗಲಿದೆ. ಇನ್ನು ಕಾಂಪ್ಲೆಕ್ಸ್ , ವಸ್ತುಸಂಗ್ರಹಾಲಯ ಸೇರಿ ಇತರ ಕಟ್ಟಗಳ ವೆಚ್ಚ 1,000 ಕೋಟಿ ರೂಪಾಯಿ.
ದೇಶವ್ಯಾಪಿ ರಾಮ ಮಂದಿ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಲಾಗಿದೆ. ದೇಣಿಗೆ ಮೂಲಕ 3,000 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಇನ್ನುಳಿದ ಹಣದಲ್ಲಿ ಆಯೋಧ್ಯೆಯನ್ನು ದರಶರಥನ ಪಟ್ಟಣವನ್ನಾಗಿ ಪರಿವರ್ತಿಸಿ ಆಧುನೀಕರಣಗೊಳಿಸಲು ಟ್ರಸ್ಟ್ ಮುಂದಾಗಿದೆ.
ಮಂದಿರ ನಿರ್ಮಾಣದಲ್ಲಿ ಉಕ್ಕು ಅಥವಾ ಇಟ್ಟಿಗೆ ಬಳಸುತ್ತಿಲ್ಲ. ಕಲ್ಲಿನ ಕೆತ್ತನೆಗಳಿಂದ ಮಂದಿರ ನಿರ್ಮಾಣವಾಗಲಿದೆ. ಆದರೆ ಆಧುನಿಕ ತಂತ್ರಜ್ಞಾನದ ಮೂಲಕ ಮಂದಿರ ನಿರ್ಮಾಣವಾಗುತ್ತಿದೆ. ಸುಮಾರು ಎರಡೂವರೆ ಏಕರೆ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣವಾಗಲಿದದೆ.
ಇನ್ನು ಪ್ರವಾಹ, ಭೂಕಂಪ ಸೇರಿ ಪ್ರಾಕೃತಿ ವಿಕೋಪಗಳನ್ನು ತಡೆಯಬಲ್ಲ ಶಕ್ತಿ ಈ ಮಂದಿರಕ್ಕಿದೆ. ಸದ್ಯ ಮಂದಿರದ ಅಡಿಪಾಯ ಕಾರ್ಯ ಸಾಗುತ್ತಿದೆ. ತೀವ್ರ ಮಳೆ, ಕೊರೋನಾ ಕಾರಣ ನಿರ್ಮಾಣ ಕೊಂಚ ವಿಳಂಬವಾಗಿತ್ತು. ಇದೀಗ ಮತ್ತೆ ವೇಗ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments