Webdunia - Bharat's app for daily news and videos

Install App

ವಯನಾಡಿನ ಸಹಜ ಸೌಂದರ್ಯ ಕಂಡಿರಾ?

Webdunia
ಗುರುವಾರ, 27 ಆಗಸ್ಟ್ 2020 (08:14 IST)
ಕೇರಳ: ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾದ ಪ್ರಮುಖ ಪ್ರವಾಸಿ ತಾಣ. ನೈಸರ್ಗಿಕ ಶುಭ್ರ ಪರಿಸರವನ್ನು ಉಳಿಸಿಕೊಂಡಿರುವ ಕೇರಳದ ಕೆಲವೇ ಕೆಲವು ಜಿಲ್ಲೆಗಳಲ್ಲಿ ಇದೂ ಒಂದು. ಇಂದಿಗೂ ಈ ಜಿಲ್ಲೆಯಲ್ಲಿ ನಾಗರಿಕತೆಯನ್ನೇ ಕಾಣದ ಹಲವು ಬುಡಕಟ್ಟು ಜನಾಂಗದವರು ವಾಸಿಸುತ್ತಿದ್ದಾರೆ. ಅಂಬಲಕುತಿಮಲ ಮತ್ತು ಎಡಕ್ಕಲ್ಲಿನ ಕೆಳಬೆಟ್ಟಗಳಲ್ಲಿ ಪೂರ್ವ ಇತಿಹಾಸದ ಕಾಲಘಟ್ಟದ ಕೆತ್ತನೆಗಳು ದೊರೆತಿವೆ.

ಚಾರಣ ಪ್ರಿಯರಿಗೆ ಇದು ಹೇಳಿ ಮಾಡಿಸಿದ ತಾಣ. ಎಡಕಲ್ಲು ಗುಡ್ಡ ಅಥವಾ ಗುಹೆಯಲ್ಲಿ 1000 ಮೀಟರ್ ಎತ್ತರದ ಗುಡ್ಡದ ಮೇಲೆ ಮೂರು ಗುಹೆಗಳು ಒಟ್ಟಾಗಿವೆ. ಇಲ್ಲಿ ಅನೇಕ ಕೆತ್ತನೆಗಳೂ ಇವೆ. ಇಲ್ಲಿಗೆ ಹೋಗಲು ಒಂದು ಕಿಮಿ ನಷ್ಟು ಎತ್ತರದ ಗುಡ್ಡ ಹತ್ತಬೇಕು.
ಚೆಂಬ್ರ ಶಿಖರವೂ ಚಾರಣಕ್ಕೆ ಹೆಚ್ಚು ಸೂಕ್ತವಾದುದು. ಸುಲ್ತಾನ್ ಬತ್ತೇರಿಯಲ್ಲಿ ಟಿಪ್ಪುವಿನ ಕೋಟೆ ಇದೆ. ಇಲ್ಲೊಂದು ಹಳೆಯ ಜೈನ ದೇವಾಲಯವಿದ್ದು ಇಲ್ಲಿ ಟಿಪ್ಪು ತನ್ನ ಮದ್ದುಗುಂಡುಗಳನ್ನು ಸಂಗ್ರಹಿಸಿಡುತ್ತಿದ್ದ ಎನ್ನಲಾಗಿದೆ.

ಮೀನುಮುಟ್ಟಿ ಜಲಪಾತ ಇಲ್ಲಿನ ಇನ್ನೊಂದು ಪ್ರೇಕ್ಷಣೀಯ ತಾಣ. ಇದು ವಯನಾಡ್ ಜಿಲ್ಲೆಯ ಅತಿ ದೊಡ್ಡ ಜಲಪಾತವಾಗಿದ್ದು 300 ಮೀಟರ್ ಎತ್ತರದಿಂದ ಮೂರು ಹಂತಗಳಲ್ಲಿ ಬೀಳುತ್ತದೆ.

ಬಾಣಾಸುರಸಾಗರದಲ್ಲಿರುವ ಅಣೆಕಟ್ಟನ್ನು ಭಾರತದಲ್ಲಿಯೇ ಅತಿದೊಡ್ಡ ಮಣ್ಣಿನ ಅಣೆಕಟ್ಟೆಂದು ಪರಿಗಣಿಸಲಾಗಿದೆ. ಪೂಕೋಟೆ ಅಥವಾ ಪೂಕೊಡೆ ಸರೋವರವು ಪ್ರಾಕೃತಿಕ ಸಿಹಿನೀರಿನ ಸರೋವರವಾಗಿದ್ದು ವನಭೋಜನಕ್ಕೆ (ಪಿಕ್ನಿಕ್) ಗೆ ಹೇಳಿ ಮಾಡಿಸಿದ ತಾಣ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

ಮುಂದಿನ ಸುದ್ದಿ
Show comments