Webdunia - Bharat's app for daily news and videos

Install App

ದೇಗುಲ ದರ್ಶನ: ಶಿವನ ಆರಾಧಕರು ಈ ದೇವಾಲಯಕ್ಕೆ ತಪ್ಪದೇ ಭೇಟಿ ಕೊಡಿ!

Webdunia
ಶುಕ್ರವಾರ, 9 ಫೆಬ್ರವರಿ 2018 (10:18 IST)
ಬೆಂಗಳೂರು: ಬೆಂಗಳೂರಿನಿಂದ ಅತ್ತಿಬೆಲೆ ಗಡಿ ದಾಟಿ ತಮಿಳುನಾಡು ಕಡೆಗೆ ಸಾಗುವಾಗ ಹೆದ್ದಾರಿಗಿಂತ ಕೊಂಚ ಪಕ್ಕದಲ್ಲೇ ಚಂದ್ರಚೂಡೇಶ್ವರ ದೇವಾಲಯ ಸಿಗುತ್ತದೆ.
 

ಪುರಾತನವಾದ ಈ ದೇವಾಲಯ ಇರುವುದು ಹೊಸೂರು ಬಳಿ, ತಮಿಳುನಾಡಿನ ಕೃಷ್ಣಗಿರಿ ತಾಲೂಕಿನಲ್ಲಿ. ತಮಿಳುನಾಡು ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ದೇವಾಲಯ ಇದಾಗಿದೆ.

ಬೆಟ್ಟವೇರಿ ಸಾಗಿದರೆ ಶಿವ ದೇಗುಲ ಸಿಗುತ್ತದೆ. ಹೊಯ್ಸಳರ ಕಾಲದಲ್ಲೇ ಈ ದೇವಾಲಯ ಅಸ್ಥಿತ್ವದಲ್ಲಿದೆ ಎಂದು ನಂಬಲಾಗಿದೆ. ಅತ್ಯಂತ ಪುರಾತನವಾದ ಈ ದೇವಾಲಯ ಸಂಪೂರ್ಣವಾಗಿ ಕಲ್ಲಿನಿಂದಲೇ ನಿರ್ಮಾಣಗೊಂಡಿದೆ. ಗರ್ಭಗುಡಿಯಲ್ಲಿ ಚಂದ್ರನನ್ನೇ ಆಭರಣವಾಗಿ ಮುಡಿಗೇರಿಸಿಕೊಂಡ ಶಿವ ಲಿಂಗವಿದೆ.

ಇಲ್ಲಿಗೆ ಪ್ರತಿ ನಿತ್ಯ ನೂರಾರು ಭಕ್ತರು ಆಗಮಿಸುತ್ತಾರೆ. ಬೆಟ್ಟದ ತುದಿಯಲ್ಲಿ ದೇವಾಲಯವಿರುವ ಕಾರಣ ಇಲ್ಲಿಂದ ಬೆಂಗಳೂರು ನಗರದ ವಿಹಂಗಮ ನೋಟ ವೀಕ್ಷಿಸಬಹುದು. ಕಲ್ಲು,  ಬಂಡೆಗಳು ಸೆಲ್ಫೀ ಪ್ರಿಯರಿಗೆ ಇಷ್ಟವಾಗುತ್ತದೆ. ಇಲ್ಲಿ ಪ್ರತಿ ನಿತ್ಯ ಊಟದ ವ್ಯವಸ್ಥೆಯೂ ಇದ್ದು, ಮೊದಲು ಬಂದ 100 ಮಂದಿಗೆ ಭೋಜನ ಲಭ್ಯವಿರುತ್ತದೆ. ಇನ್ನೇನು ಶಿವರಾತ್ರಿ ಬಂತು. ಶಿವ ದೇಗುಲಕ್ಕೆ ಭೇಟಿ ನೀಡುವ ಯೋಜನೆಯಿದ್ದರೆ ಇಲ್ಲಿಗೆ ಬರಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments