ಆಷಾಢ ಶುಕ್ರವಾರ ಚಾಮುಂಡಿ ತಾಯಿಗೆ ವಿಶೇಷ ಯಾಕೆ

Krishnaveni K
ಶುಕ್ರವಾರ, 12 ಜುಲೈ 2024 (08:42 IST)
ಬೆಂಗಳೂರು: ಇಂದು ಆಷಾಢ ಶುಕ್ರವಾರದ ಶುಭದಿನವಾಗಿದ್ದು, ನಾಡದೇವಿ ಚಾಮುಂಡಿ ದೇವಿಯ ದರ್ಶನ ಪಡೆಯಲು ಭಕ್ತರು ಸಾಲುಗಟ್ಟಿ ನಿಂತಿರುತ್ತಾರೆ. ಆಷಾಢ ಶುಕ್ರವಾರವೆಂದರೆ ಚಾಮುಂಡಿ ತಾಯಿಗೆ ವಿಶೇಷ ಯಾಕೆ ನೋಡಿ.

ಆಷಾಢ ಮಾಸದ ಮೊದಲ ಶುಕ್ರವಾರವನ್ನು ಆಷಾಢ ಶುಕ್ರವಾರವೆಂದು ಆಚರಿಸಲಾಗುತ್ತದೆ. ಈ ದಿನ ಮೈಸೂರಿನ ಚಾಮುಂಡಿ ದೇವತೆಯ ಸನ್ನಿಧಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಆಷಾಢ ಶುಕ್ರವಾರ ಚಾಮುಂಡಿ ತಾಯಿಯ ಜಯಂತಿ ಅಂದರೆ ಜನ್ಮ ದಿನವಾಗಿದೆ.

ಹೀಗಾಗಿ ಇಂದು ಚಾಮುಂಡಿ ದರ್ಶನಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಆಷಾಢ ಶುಕ್ರವಾರದಂದು ದೇವಿಯ ದರ್ಶನ ಪಡೆದರೆ ವಿಶೇಷವೆಂದೇ ಪರಿಗಣಿಸಲಾಗಿದೆ. ಆಷಾಢ ಮಾಸದಲ್ಲಿ ಬರುವ ಎಲ್ಲಾ ಶುಕ್ರವಾರವೂ ಶುಭ ದಿನವೇ. ಆದರೆ ಮೊದಲ ಶುಕ್ರವಾರ ವಿಶೇಷವಾಗಿದೆ.

ಈ ದಿನ ಚಾಮುಂಡಿ ತಾಯಿಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ. ದೇವಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡಲಾಗುತ್ತದೆ. ವಿಶೇಷ ಮಂತ್ರ ಘೋಷಗಳ ಮೂಲಕ ಪೂಜೆ ನಡೆಯುತ್ತದೆ. ಈ ದಿನ ದೇವಿಯ ಮುಂದೆ ನಿಂತು ಯಾವುದೇ ಬೇಡಿಕೆ ಇಟ್ಟರೂ ದೇವಿ ನೆರವೇರಿಸುತ್ತಾಳೆ ಎಂಬ ನಂಬಿಕೆಯಿದೆ. ಹೀಗಾಗಿ ಸಾಕಷ್ಟು ಜನ ಸಾರ್ವಜನಿಕರು ಮಾತ್ರವಲ್ಲ, ವಿಐಪಿಗಳೂ ಬಂದು ಇಂದು ಚಾಮುಂಡಿ ತಾಯಿಯ ದರ್ಶನ ಮಾಡಿಕೊಂಡು ಹೋಗುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments