Webdunia - Bharat's app for daily news and videos

Install App

‘ಯಾರಿಗೂ ಇಲ್ಲದ ಸವಲತ್ತು ಸಂಜಯ್ ದತ್ ಗೆ ಯಾಕೆ ಕೊಟ್ಟಿರಿ?’

Webdunia
ಸೋಮವಾರ, 3 ಜುಲೈ 2017 (15:26 IST)
ಮುಂಬೈ: ಬಾಲಿವುಡ್ ಸ್ಟಾರ್ ಸಂಜಯ್ ದತ್ ರನ್ನು ಅವಧಿಗೆ ಮುನ್ನ ಬಿಡುಗಡೆಗೊಳಿಸಿದ್ದ ಮಹಾರಾಷ್ಟ್ರ ಸರ್ಕಾರ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಈ ವಿಚಾರದಲ್ಲಿ ವಿವರಣೆ ನೀಡುವಂತೆ ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಎರಡು ವಾರಗಳ ಸಮಯಾವಕಾಶ ನೀಡಿದೆ.


1993 ಮುಂಬೈ ಸರಣಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ ಸಂಜಯ್ ದತ್ ಗೆ 2013 ರಲ್ಲಿ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅವರು ಯೆರವಾಡಾದ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು.

ಶಿಕ್ಷೆಯ ನಡುವೆ ಆಗಾರ ವೈದ್ಯಕೀಯ ತಪಾಸಣೆ, ಪೆರೋಲ್ ಮೇಲೆ ಬಿಡುಗಡೆಯಾಗಿ ಮನೆಗೆ ತೆರಳುತ್ತಿದ್ದರು. ಇಷ್ಟೂ ಸಾಲದೆಂಬಂತೆ ಅವರು ಬಿಡುಗಡೆಯಾಗಬೇಕಿದ್ದ 8 ತಿಂಗಳ ಮೊದಲೇ ಸರ್ಕಾರ ಅವರನ್ನು ಸನ್ನಡತೆಯ ಆಧಾರದಲ್ಲಿ ಬಂಧ ಮುಕ್ತಗೊಳಿಸಿತ್ತು. ಇದರ ವಿರುದ್ಧ ಬಾಂಬೆ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ಇದೀಗ ಬೇರೆ ಖೈದಿಗಳೂ ಸನ್ನಡತೆಯ ಆಧಾರದಲ್ಲಿ ಬಿಡುಗಡೆಯಾಗುವ ಅರ್ಹತೆ ಹೊಂದಿದ್ದರೂ, ಜೈಲಿನಲ್ಲೇ ಕೊಳೆಯುತ್ತಿರುವಾಗ ಸಂಜಯ್ ದತ್ ಗೆ ಮಾತ್ರ ಹೇಗೆ ವಿಶೇಷ ಸವಲತ್ತು ನೀಡಿ ಬಿಡುಗಡೆ ಮಾಡಿದಿರಿ ಎಂದು ಕೋರ್ಟ್ ಪ್ರಶ್ನಿಸಿದೆ. ಅಲ್ಲದೆ ಎರಡು ವಾರಗಳೊಳಗೆ ಸರ್ಕಾರ ವಿವರಣೆ ನೀಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments