ಮಂಡ್ಯ : ಕನ್ನಡದ ಹಿರಿಯ ನಟಅಂಬರೀಷ್ ಅವರು ತಮ್ಮ ಆಸ್ತಿ ಯನ್ನು ಗುರುವಾರ ಮಗನ ಹೆಸರಿಗೆ ವರ್ಗಾಯಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ನಟ ಅಂಬರೀಷ್ ಅವರ ಪುತ್ರ ಅಭಿಷೇಕ್ ಅವರು ಇತ್ತೀಚೆಗಷ್ಟೇ ಸಿನಿಮಾ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಇದೀಗ ನಟ ಅಂಬರೀಷ್ ಅವರು ತಮ್ಮ ಹುಟ್ಟೂರು ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ಗ್ರಾಮದ ವ್ಯಾಪ್ತಿಯಲ್ಲಿ ಇರುವ ಸುಮಾರು 20 ಎಕರೆ ಜಮೀನು, ತೋಟ, ಮನೆ ಸೇರಿದಂತೆ ಇನ್ನಿತರ ಆಸ್ತಿಗಳನ್ನು ಮಗನ ಹೆಸರಿಗೆ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.
ಗುರುವಾರ ಮದ್ದೂರಿನಲ್ಲಿರುವ ಸಬ್ ರಿಜಿಸ್ಟ್ರಾರ್ ಕಛೇರಿ ಗೆ ತಮ್ಮ ಪುತ್ರ ಅಭಿಷೇಕ್ ಜೊತೆ ಅಂಬರೀಷ್ ಅವರು ಭೇಟಿ ನೀಡಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಛೇರಿಯಲ್ಲಿದ್ದರು, ಆ ವೇಳೆ ಅವರು ಕಛೇರಿಯ ಒಳಗಿದ್ದ ಯಾರಿಗೂ ಪೋಟೋ ಮತ್ತು ವೀಡಿಯೋ ತೆಗೆಯಲು ಅವಕಾಶ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ