ಕನ್ನಡ ಚಿತ್ರ ಜಗತ್ತಿನಲ್ಲಿ ಸಾಧನೆ ಮಾಡಿರುವ ಕಲಾವಿದರನ್ನು ಕರೆ ತಂದು, ಅವರ ಸಾಧನೆಗಳನ್ನು ಮೆಲಕು ಹಾಕುವ ' ಬೆಳ್ಳಿ ಹೆಜ್ಜೆ' ಕಾರ್ಯಕ್ರಮಕ್ಕೆ ನಟಿ ಜೂಲಿ ಲಕ್ಷ್ಮೀ ಆಗಮಿಸಲಿದ್ದು, ಕಾರ್ಯಕ್ರಮದ ವೇಳೆ ತಮ್ಮ ಹಳೆಯ ನೆನಪುಗಳನ್ನು ಬಿಚ್ಚಿಡಲಿದ್ದಾರೆ.
ಕರ್ನಾಟಕ ಚಲನಚಿತ್ರ ಅಕಾಡೆಮಿಯು ಬೆಳ್ಳಿ ಹೆಜ್ಜೆಯನ್ನು ಹಮ್ಮಿಕೊಳ್ಳುತ್ತದೆ. ಈ ಕಾರ್ಯಕ್ರಮದಲ್ಲಿ ಈ ಬಾರಿ ಕನ್ನಡ ಚಿತ್ರರಂಗದಲ್ಲಿ ಜೂಲಿ ಎಂದೇ ಹೆಸರು ವಾಸಿಯಾಗಿರುವ ಹಿರಿಯ ನಟಿ ಲಕ್ಷ್ಮೀ ಆಗಮಿಸಿ ತಮ್ಮ ಹಳೆಯ ನೆನಪುಗಳನ್ನು ನೆನಪಿಸಿಕೊಳ್ಳಲಿದ್ದಾರೆ.
ಈ ವೇಳೆ ಅವರು ನಡೆದು ಬಂದ ಹಾದಿಯ ಬಗ್ಗೆ ಮಾತನಾಡಲಿದ್ದಾರೆ. ನಾಳೆ ನಡೆಯುವ ಬೆಳ್ಳಿ ಹೆಜ್ಜೆ ಕಾರ್ಯಕ್ರಮಕ್ಕೆ ಹಿರಿಯ ನಟಿ ಜೂಲಿ ಲಕ್ಷ್ಮೀ ತಮ್ಮ ಹಳೇ ನೆನಪುಗಳನ್ನು ಬಿಚ್ಚಿಡಲಿದ್ದಾರೆ.
ನಾಳೆ ಸಂಜೆ 5 ಗಂಟೆಗೆ ಬೆಂಗಳೂರಿನ ಕೃಪಾ ಕುಮಾರ್ ರಸ್ತೆಯ ಗಾಂಧಿ ಭವನದಲ್ಲಿರುವ ಮಹದೇವ ದೇಸಾಯಿ ಸಭಾಂಗಣದಲ್ಲಿ ಹಿರಿಯ ನಟಿ ಲಕ್ಷ್ಮೀ ಜತೆಗೆ ಬೆಳ್ಳಿ ಹೆಜ್ಜೆ ಸಂವಾದ ಕಾರ್ಯಕ್ರಮ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಕನ್ನಡ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಟ ಜೈ ಜಗದೀಶ್, ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು
ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ