Webdunia - Bharat's app for daily news and videos

Install App

ಅಮಿತಾಭ್ ಬಚ್ಚನ್ ಇನ್ನು ನಿವೃತ್ತಿ ಹೊಂದಬೇಕು : ಸಲೀಂ ಖಾನ್ ಅಭಿಪ್ರಾಯ

Webdunia
ಬುಧವಾರ, 13 ಅಕ್ಟೋಬರ್ 2021 (09:14 IST)
ಅಮಿತಾಭ್ ತಮ್ಮ ಜೀವನದಲ್ಲಿ ಏನೆಲ್ಲಾ ಸಾಧನೆ ಮಾಡಬಹುದೋ ಅದೆಲ್ಲವನ್ನೂ ಮಾಡಿದ್ದಾರೆ. ಒಬ್ಬ ವ್ಯಕ್ತಿ ಅವರಿಗಾಗಿಯೇ ಜೀವನದ ಕೆಲವು ವರ್ಷಗಳನ್ನಾದರೂ ಮೀಸಲಿಡಬೇಕು ಎಂದು ಸಲೀಂ ಖಾನ್ ಹೇಳಿದ್ದಾರೆ.

ಅಮಿತಾಭ್ ಬಚ್ಚನ್ ಬಹಳಷ್ಟು ಸಾಧಿಸಿದ್ದಾರೆ. ಅವರು ಚಿತ್ರರಂಗದಿಂದ ನಿವೃತ್ತಿ ಹೊಂದಬೇಕು ಎಂದು ಬರಹಗಾರ ಸಲೀಂ ಖಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಲೀಂ ಹಾಗೂ ಅಮಿತಾಭ್ ಬಚ್ಚನ್ ಸುಮಾರು 10ಕ್ಕೂ ಅಧಿಕ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಅಮಿತಾಭ್ ತಮ್ಮ ಜೀವನದಲ್ಲಿ ಏನೆಲ್ಲಾ ಸಾಧನೆ ಮಾಡಬಹುದೋ ಅದೆಲ್ಲವನ್ನೂ ಮಾಡಿದ್ದಾರೆ. ಒಬ್ಬ ವ್ಯಕ್ತಿ ಅವರಿಗಾಗಿಯೇ ಜೀವನದ ಕೆಲವು ವರ್ಷಗಳನ್ನಾದರೂ ಮೀಸಲಿಡಬೇಕು. ಅವರು ಈಗಾಗಲೇ ಅದ್ಭುತ ಕೆಲಸಗಳನ್ನು ಚಿತ್ರರಂಗದಲ್ಲಿ ಮಾಡಿದ್ದಾರೆ. ಹಾಗಾಗಿ, ಈಗ ಅವರು ಈ ಓಟದಿಂದ ಹಿಂದೆ ಸರಿಯಬೇಕು, ನಿವೃತ್ತಿ ಹೊಂದಬೇಕು ಎಂದು ಸಲೀಂ ಖಾನ್ ದೈನಿಕ್ ಭಾಸ್ಕರ್ಗೆ ನೀಡಿದ್ದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ನಿವೃತ್ತಿ ಎಂಬ ವ್ಯವಸ್ಥೆ ಇರುವುದು ಅದಕ್ಕಾಗಿ. ಅಲ್ಲಿ ಒಬ್ಬ ವ್ಯಕ್ತಿ ತನ್ನ ಜೀವನವನ್ನು ತನ್ನ ಇಷ್ಟದಂತೆ ಕಳೆಯಬೇಕು. ಜೀವನದ ಮೊದಲ ವರ್ಷಗಳು ಕಲಿಯುವಿಕೆ, ಅಧ್ಯಯನದಲ್ಲಿ ಕಳೆದುಹೋಗುತ್ತದೆ. ನಂತರ ನಿಮಗೆ ಜವಾಬ್ದಾರಿಗಳು ಬರುತ್ತವೆ. ಉದಾಹರಣೆಗೆ, ನನ್ನ ಜೀವನ ಈಗ ಸೀಮಿತವಾಗಿದೆ. ನನ್ನ ಜೊತೆಗೆ ಈಗ ಹೆಜ್ಜೆ ಹಾಕುತ್ತಿರುವವರು ಎಲ್ಲರೂ ಸಿನಿಮೇತರ ಹಿನ್ನೆಲೆಯವರಾಗಿದ್ದಾರೆ ಎಂದು ಸಲೀಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments