Webdunia - Bharat's app for daily news and videos

Install App

ಕುಕ್ಕೆಯಲ್ಲಿ ಸರ್ಪ ಸಂಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್‌

Sampriya
ಮಂಗಳವಾರ, 11 ಮಾರ್ಚ್ 2025 (19:00 IST)
Photo Courtesy X
ಮಂಗಳೂರು: ಈಚೆಗೆ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಇಂದು ದಕ್ಷಿಣ ಕನ್ನಡದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ತನ್ನ ಸ್ನೇಹಿತೆಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ಕತ್ರಿನಾ, ಸರ್ಪ ಸಂಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ.

ಮಂಗಳವಾರ ಮತ್ತು ಬುಧವಾರದಂದು ತಲಾ ನಾಲ್ಕರಿಂದ ಐದು ಗಂಟೆಗಳ ಕಾಲ ಎರಡು ಹಂತಗಳಲ್ಲಿ ಪೂಜೆಯನ್ನು ನಡೆಸಲಾಗುತ್ತದೆ.

ದೇವಸ್ಥಾನದ ವಿಐಪಿ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲಿರುವ ಕತ್ರಿನಾ ಬುಧವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಧಾರ್ಮಿಕ ಕ್ರಿಯೆಯನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments