Webdunia - Bharat's app for daily news and videos

Install App

ವಿನಾಶಕಾರಿ ಕಾಳ್ಗಿಚ್ಚಿನಲ್ಲಿ ಬದುಕುಳಿದದ್ದಕ್ಕೆ ದೇವರಿಗೆ ಋಣಿ: ಹೃದಯ ಚೂರಾಗಿದೆ ಎಂದ ಪ್ರೀತಿ ಜಿಂಟಾ

Sampriya
ಭಾನುವಾರ, 12 ಜನವರಿ 2025 (15:27 IST)
Photo Courtesy X
ಲಾಸ್‌ ಏಂಜಲೀಸ್‌: ಅಮೆರಿಕಾದ ಲಾಸ್‌ ಏಂಜಲೀಸ್‌ನಲ್ಲಿ ನೆಲೆಸಿರುವ ಬಾಲಿವುಡ್‌ ನಟಿ ಪ್ರೀತಿ ಜಿಂಟಾ ಅವರು ಅಲ್ಲಿನ ವಿನಾಶಕಾರಿ ಕಾಳ್ಗಿಚ್ಚಿನ ಬಗ್ಗೆ ಎಕ್ಸ್‌/ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

 ಕಾಳ್ಗಿಚ್ಚಿನ ಕುರಿತು ಆಘಾತ ವ್ಯಕ್ತಪಡಿಸಿರುವ ಅವರು, ತಾನು ಸುರಕ್ಷಿತವಾಗಿದ್ದೇನೆ. ಆದರೆ, ವಿನಾಶಕಾರಿ ಕಾಳ್ಗಿಚ್ಚನ್ನು ಕಂಡು ಹೃದಯ ಚೂರಾಗಿದೆ ಎಂದಿದ್ದಾರೆ.

ಕಾಳ್ಗಿಚ್ಚಿನಿಂದಾಗಿ ಈವರೆಗೆ 16 ಮಂದಿ ಮೃತಪಟ್ಟಿರುವುದಾಗಿ ಲಾಸ್‌ ಏಂಜಲೀಸ್‌ ಕೌಂಟಿ ವೈದ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ. ಕಳೆದವಾರ ಕಾಣಿಸಿಕೊಂಡ ಕಾಳ್ಗಿಚ್ಚಿನಿಂದಾಗಿ, ಮನೆಗಳು, ವಸತಿ ಸಮುಚ್ಚಯಗಳು, ವಾಣಿಜ್ಯ ಕೇಂದ್ರಗಳು ಸೇರಿದಂತೆ ಈವರೆಗೆ 12,000 ಕ್ಕೂ ಹೆಚ್ಚು ಕಟ್ಟಡಗಳು ಸುಟ್ಟುಕರಕಲಾಗಿವೆ.

ಪ್ರೀತಿ ಜಿಂಟಾ ಅವರು ಹಣಕಾಸು ವಿಶ್ಲೇಷಕ ಆಗಿರುವ ಪತಿ ಜೆನ್‌ ಗುಡ್‌ನಫ್ ಹಾಗೂ ಅವಳಿ ಮಕ್ಕಳೊಂದಿಗೆ ಲಾಸ್‌ ಏಂಜಲೀಸ್‌ನಲ್ಲಿ ವಾಸವಾಗಿದ್ದಾರೆ. ಕಾಳ್ಗಿಚ್ಚಿನ ಭೀಕರತೆ ಬಗ್ಗೆಬರೆದುಕೊಂಡಿರುವ ಅವರು, ಇಂಥಹ ಭೀಕರ ದಿನಗಳನ್ನು ನೋಡುತ್ತೇನೆ ಎಂದುಕೊಂಡಿರಲಿಲ್ಲ ಎಂದಿದ್ದಾರೆ.

ನಮ್ಮ ಸುತ್ತಮುತ್ತಲಿನ ಪರಿಸರವನ್ನು ಅಗ್ನಿ ಆಹುತಿ ಪಡೆಯುತ್ತದೆ ಎಂದು ಊಹಿಸಿರಲಿಲ್ಲ. ಈ ವಿನಾಶದಿಂದಾಗಿ ಎದೆಗುಂದಿದ್ದೇನೆ. ಬದುಕುಳಿದದ್ದಕ್ಕೆ ದೇವರಿಗೆ ಕೃತಜ್ಞರಾಗಿರುತ್ತೇನೆ. ಎಲ್ಲವನ್ನೂ ಕಳೆದುಕೊಂಡು ಸ್ಥಳಾಂತರಗೊಂಡಿರುವವರಿಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments