Webdunia - Bharat's app for daily news and videos

Install App

ದನಕಾಯೋನು ಸಿನಿಮಾ ಆಡಿಯೋ ಲಾಂಚ್‌ಗೆ ದುನಿಯಾ ವಿಜಿ ಗೈರಾಗಿದ್ದ್ಯಾಕೆ?

Webdunia
ಮಂಗಳವಾರ, 10 ಮೇ 2016 (11:32 IST)
ಮೊನ್ನೆಯಷ್ಟೇ ಯೋಗರಾಜ್ ಭಟ್ ನಿರ್ದೇಶನದ ದನಕಾಯೋನು ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಕನಕಪುರದಲ್ಲಿ ಅದ್ಧೂರಿಯಾಗಿ ನಡೆಯಿತು.ಆದ್ರೆ ಸಿನಿಮಾದ ನಾಯಕ ದುನಿಯಾ ವಿಜಿ ಮಾತ್ರ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಇದು ಗಾಂಧೀನಗರದಲ್ಲಿ ಭಾರೀ ಸುದ್ದಿ ಹಾಗೇ ಕುತೂಹಲಕ್ಕೆ ಕಾರಣವಾಗಿದೆ.
ತಮ್ಮ ಸಿನಿಮಾದ ಯಾವುದೇ ಕಾರ್ಯಕ್ರಮವಾದರೂ ಸರಿ ಅದಕ್ಕೆ ಆ ಸಿನಿಮಾದ ನಾಯಕ ನಾಯಕಿ ಬಂದೇ ಬರುತ್ತಾರೆ.ಆದ್ರೆ ದನಕಾಯೋನು ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮಕ್ಕೆ ದುನಿಯಾ ವಿಜಿ ಪತ್ತೇನೇ ಇರಲಿಲ್ಲ.
 
ಅಂದ್ಹಾಗೆ ವಿಜಿ ಯಾವುದೋ ವೈಮನಸ್ಸಿನಿಂದ ಕಾರ್ಯಕ್ರಮಕ್ಕೆ ಗೈರಾಗಿಲ್ಲ. ಬದಲಾಗಿ ಅವರು ತಮ್ಮ ಇನ್ನೊಂದು ಚಿತ್ರದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಮಾಸ್ತಿಗುಡಿ ಸಿನಿಮಾದ ಶೂಟಿಂಗ್ ಇದ್ದುದರಿಂದ ಅವರು ಕಾರ್ಯಕ್ರಮಕ್ಕೆ ಬರೋದಿಕ್ಕೆ ಸಾಧ್ಯವಾಗಲಿಲ್ಲವಂತೆ. 
 
ಅಂದ್ಹಾಗೆ ಮೊನ್ನೆ ಮಾಸ್ತಿಗುಡಿ ಸಿನಿಮಾದಲ್ಲಿನ ರವಿಶಂಕರ್ ಗೌಡ ಅಭಿನಯದ ಹಲವು ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳಲಾಗಿದೆ. ವಿಜಯ್ ಸಹ ಇದೇ ಚಿತ್ರೀಕರಣದಲ್ಲಿದ್ದಾರೆ. ವಿಜಯ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ ದೃಶ್ಯಗಳನ್ನು ಶಿರಸಿ-ಸಿದ್ಧಾಪುರದ ಕಾಡುಗಳಲ್ಲಿ ಚಿತ್ರೀಕರಣ ಮಾಡುತ್ತಿದ್ದಾರಂತೆ ನಿರ್ದೇಶಕ ನಾಗಶೇಖರ್.
 
ಅದೇನೋ ಸರಿ ದುನಿಯಾ ವಿಜಿ  ಸಿನಿಮಾದ ಶೂಟಿಂಗ್ ಅಂತಾ ಕಾರ್ಯಕ್ರಮಕ್ಕೆ ಮಿಸ್ ಆಗಿದ್ದರು.ಆದ್ರೆ ಸಿನಿಮಾದ ನಾಯಕಿ ಪ್ರಿಯಾಮಣಿ ಅವರು ಯಾಕಪ್ಪಾ ಕಾರ್ಯಕ್ರಮಕ್ಕೆ ಬರಲಿಲ್ಲ ಅನ್ನೋದು ಗಾಂಧೀನಗರದ ಮಂದಿಯ ಪ್ರಶ್ನೆ.ಅದಕ್ಕೆ ಪ್ರಿಯಾ ಮೇಡಮ್ ಅವರೇ ಉತ್ತರ ನೀಡಬೇಕಿದೆ.ಒಟ್ಟಿನಲ್ಲಿ ಈ ಕಾರ್ಯಕ್ರಮ ಹಲವು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಮುಂದಿನ ಸುದ್ದಿ
Show comments