ಕನ್ನಡಿಗರಿಗೆ ಸವಾಲೆಸೆದಿದ್ದಕ್ಕೆ ಕ್ಷಮೆ ಕೇಳಿದ ನಟ ಗಿರೀಶ್

Webdunia
ಬುಧವಾರ, 6 ಜೂನ್ 2018 (14:21 IST)
ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರದ ಬಿಡುಗಡೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಕೋಪಕ್ಕೆ ಕಾರಣರಾದ  ಸ್ಟೈಲ್ ರಾಜಾ ಚಿತ್ರದ ನಾಯಕ ನಟ ಗಿರೀಶ್ ಇದೀಗ ತಮ್ಮ ಕೃತ್ಯಕ್ಕೆ ಕನ್ನಡಿಗರಲ್ಲಿ ಕ್ಷಮೆ ಯಾಚಿಸಿದ್ದಾರೆ.

ನಟ ರಜನೀಕಾಂತ್ ಅವರು ಕಾವೇರಿ ವಿವಾದದಲ್ಲಿ ಕರ್ನಾಟಕದ ವಿರುದ್ಧ ಮಾತನಾಡಿದ್ದಕ್ಕೆ ಕೋಪಗೊಂಡ ಕನ್ನಡಿಗರು ಅವರ ಕಾಲಾ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದೆಂದು ತಡೆಯೊಡ್ಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ್ದ ನಟ ಗಿರೀಶ್ ಅವರು ರಜನಿಕಾಂತ್ ಅಭಿನಯದ ಕಾಲಾ ಚಿತ್ರದ ಬಿಡುಗಡೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ತಾಕಿತ್ತಿದ್ದರೆ ಈ ಚಿತ್ರ ಬಿಡುಗಡೆ ತಡೆಯಿರಿ. ಕರ್ನಾಟಕದಲ್ಲಿರುವ ರಜನಿಕಾಂತ್ ಅಭಿಮಾನಿಗಳು ಈ ಚಿತ್ರವನ್ನು ನೋಡುತ್ತಾರೆ ಎಂದು ಹೇಳಿ ವಿಡಿಯೋ ಅಪ್ಲೋಡ್ ಮಾಡಿದ್ದರು.

 

ಈ ವಿಡಿಯೋ ಕನ್ನಡಿಗರನ್ನು ಕೆರಳಿಸಿದ್ದು ಈ ಹೇಳಿಕೆಗೆ ಬಾರೀ ವಿರೋಧ ವ್ಯಕ್ತವಾಗಿತ್ತು. ಇದನ್ನು ತಿಳಿದ ನಟ ಗಿರೀಶ್ ಅವರು ಇತ್ತೀಚೆಗೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಗೆ ಆಗಮಿಸಿ ತಮ್ಮ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಿದ್ದರು. ಅಲ್ಲದೆ ಕನ್ನಡಿಗರಲ್ಲಿ  ಕ್ಷಮೆ ಕೋರಿ ಪತ್ರ ಕೂಡ ಸಲ್ಲಿಕೆ ಮಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments