Webdunia - Bharat's app for daily news and videos

Install App

ಹಿಂದಿ ಗೀತೆ ರಚನೆಗಾರ, ಖ್ಯಾತ ಕವಿ ಗೋಪಾಲ್‌ದಾಸ್ ನೀರಜ್ ಇನ್ನಿಲ್ಲ

Webdunia
ಶುಕ್ರವಾರ, 20 ಜುಲೈ 2018 (15:39 IST)
ನವದೆಹಲಿ : ಹಿಂದಿ ಗೀತೆ ರಚನೆಗಾರ, ಖ್ಯಾತ ಕವಿ ಗೋಪಾಲ್‌ದಾಸ್ ನೀರಜ್ ಅವರು ಗುರುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.


ಇವರಿಗೆ 93 ವರ್ಷ ವಯಸ್ಸಾಗಿದ್ದು, ಕಳೆದ ಕೆಲವು ವರ್ಷಗಳಿಂದ ವಯೋಸಹಜ ಹಾಗೂ ಉಸಿರಾಟದ ತೊಂದರೆಯಿಂದ ಗೋಪಾಲ್ ದಾಸ್ ಬಳಲುತ್ತಿದ್ದರು. ಬುಧವಾರ ಸಂಜೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಆಗ್ರಾದಿಂದ ಎಐಐಎಂಎಸ್ ನ ಪಲ್ಮನರಿ ಇಲಾಖೆಗೆ ಅವರನ್ನು ಕರೆತರಲಾಗಿತ್ತು ಎಂದು ಕುಟುಂಬ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.


ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಮಂದಿ ಗಣ್ಯರು ನೀರಜ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇವರು ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿಗೆ ಅವರು ಪಾತ್ರರಾಗಿದ್ದರು. ಇವರು ಬಾಲಿವುಡ್ ಚಿತ್ರಗಳ ಜನಪ್ರಿಯ ಗೀತೆಗಳ ಮೂಲಕ 1960 ಮತ್ತು 70ರ ದಶಕದಲ್ಲಿ ಚಿತ್ರರಸಿಕರಲ್ಲಿ ಹುಚ್ಚು ಹಿಡಿಸಿದ್ದರು. ಫೂಲನ್ ಕೆ ರಂಗ್ ಸೇ (ಪ್ರೇಮ್‌ಪುಜಾರಿ), ಎ ಭಾಯ್ ಝರಾ ದೇಖ್ ಖೆ (ಮೇರಾ ನಾಮ್ ಜೋಕರ್) ಹಾಗೂ ಮೇರೆ ಮನ್ ತೆರಾ ಪ್ಯಾಸಾ (ಗ್ಯಾಂಬ್ಲರ್) ಅವರ ಕೆಲ ಜನಪ್ರಿಯ ಹಾಡುಗಳು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments