Webdunia - Bharat's app for daily news and videos

Install App

ಕೃಷ್ಣ ಮೃಗಗಳ ಬೇಟೆಯಾಡಿದ ಪ್ರಕರಣ ; ನಟ ಸಲ್ಮಾನ್ ಖಾನ್ ಗೆ 5 ವರ್ಷ ಶಿಕ್ಷೆ ಹಾಗೂ 10ಸಾವಿರ ದಂಡ

Webdunia
ಗುರುವಾರ, 5 ಏಪ್ರಿಲ್ 2018 (12:43 IST)
ರಾಜಸ್ಥಾನ : ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಸಹ ನಟ ನಟಿಯರು 20 ವರ್ಷಗಳ ಹಿಂದೆ ಕೃಷ್ಣ ಮೃಗಗಳ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ(ಇಂದು) ರಾಜಸ್ಥಾನದ ಜೋಧ್ ಪುರ ಕೋರ್ಟ್ ಅಂತಿಮ ತೀರ್ಪುನ್ನು ಪ್ರಕಟಿಸಿದೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 28ರಂದು ವಿಚಾರಣೆ ನಡೆಸಿದ ನ್ಯಾ.ದೇವ್‌ಕುಮಾರ್‌ ಖತ್ರಿ ಅವರು ಇಂದು ಅಂತಿಮ ತೀರ್ಪನ್ನು ನೀಡಿದ್ದು, ಇದರಲ್ಲಿ ನಟ ಸಲ್ಮಾನ್ ಖಾನ್ ಅವರು ದೋಷಿ ಎಂದು ಪ್ರಕಟಿಸಲಾಗಿದೆ. ಆದರೆ ಉಳಿದ ನಾಲ್ವರು ನಟ-ನಟಿಯರನ್ನು ಈ ಆರೋಪದಿಂದ ಖುಲಾಸೆಗೊಳಿಸಿದ್ದಾರೆ.


ಈ ಪ್ರಕರಣದಲ್ಲಿ 1ವರ್ಷದಿಂದ ಗರಿಷ್ಠ 6 ವರ್ಷಗಳ ಕಾಲ ಶಿಕ್ಷೆ ವಿಧಿಸುವ ಅವಕಾಶವಿದ್ದು, ಇದೀಗ ದೋಷಿ ಎಂದು ಪರಿಗಣಿಸಿದ ನಟ ಸಲ್ಮಾನ್ ಖಾನ್ ಅವರಿಗೆ 5 ವರ್ಷಗಳ ಕಾಲ ಶಿಕ್ಷೆ ಜೊತೆಗೆ 10 ಸಾವಿರ ರೂ.ದಂಡ ವಿಧಿಸಲಾಗಿದೆ. ಜಾಮೀನು ಅರ್ಜಿ ಸಲ್ಲಿಸುವ ಅವಕಾಶವಿದೆ. ಈ ಕಾರಣದಿಂದ ಶ್ಯೂರಿಟಿಗಳು ಈಗಾಗಲೇ ಕೋರ್ಟ್ ಗೆ ಆಗಮಿಸಿದ್ದರಿಂದ ನಟ ಸಲ್ಮಾನ್ ಅವರು ಕೂಡ ತಕ್ಷಣ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments