Select Your Language

Notifications

webdunia
webdunia
webdunia
webdunia

ಎಲ್ಲರ ಆಶೀರ್ವಾದದಿಂದ ಆರೋಗ್ಯವಾಗಿದ್ದೇನೆ: ಗುಂಡೇಟು ತಗಲಿದ ನಟ ಗೋವಿಂದ ಪ್ರತಿಕ್ರಿಯೆ

Actor Govinda

Sampriya

ಮುಂಬೈ , ಮಂಗಳವಾರ, 1 ಅಕ್ಟೋಬರ್ 2024 (14:15 IST)
Photo Courtesy X
ಮುಂಬೈ: ನಿಮ್ಮ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ದೇವರ ಆಶೀರ್ವಾದದಿಂದ ಆರೋಗ್ಯವಾಗಿದ್ದೇನೆ. ಬೆಳಿಗ್ಗೆ ಗುಂಡು ಬಿದ್ದಿತ್ತು. ಅದನ್ನು ತೆಗೆಯಲಾಗಿದೆ. ಆಸ್ಪತ್ರೆಯ ವೈದ್ಯರಿಗೆ ಧನ್ಯವಾದ ಹೇಳುತ್ತೇನೆ. ನಿಮ್ಮ ಪ್ರಾರ್ಥನೆಗಾಗಿ ಧನ್ಯವಾದಗಳು ಎಂದು ನಟ ಗೋವಿಂದ ಹೇಳಿದ್ದಾರೆ.

ಇಂದು ಬೆಳಿಗ್ಗೆ ನಟ ಗೋವಿಂದ ಅವರ ಕಾಲಿಗೆ ಗುಂಡು ತಗುಲಿದೆ. ಪರವಾನಿಗೆ ಹೊಂದಿರುವ ಗನ್​ನಿಂದ ಮಿಸ್ ಫೈಯರ್ ಆಗಿದೆ. ಅವರನ್ನು ಮುಂಬೈನ ಅಂಧೇರಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಘಟನೆ ಬಗ್ಗೆ ಗೋವಿಂದ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಇದ್ದ ಆಂತಕ ದೂರ ಮಾಡಿದ್ದಾರೆ.‌

ಗೋವಿಂದ ಅವರು ಇಂದು ಕೋಲ್ಕತ್ತ ತೆರಳುವವರಿದ್ದರು. ಮುಂಜಾನೆ 5 ಗಂಟೆ ಸುಮಾರಿಗೆ ಅವರು ರೆಡಿ ಆಗುವಾಗ ಕೈಯಲ್ಲಿದ್ದ ಗನ್ ಕೈ ಜಾರಿದೆ. ಆಗ ಆಕಸ್ಮಿಕವಾಗಿ ಬುಲೆಟ್ ಫೈಯರ್ ಆಗಿದೆ. ಇದರಿಂದ ಅವರ ಕಾಲಿಗೆ ಬುಲೆಟ್ ತಾಗಿದೆ. ಬುಲೆಟ್ ಶಬ್ದ ವರದಿ ಆದ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೇಸ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Actor Govinda: ಬಾಲಿವುಡ್ ನಟ ಗೋವಿಂದಗೆ ಗುಂಡೇಟು: ಆಸ್ಪತ್ರೆಗೆ ದಾಖಲು