Webdunia - Bharat's app for daily news and videos

Install App

ಇರ್ಫಾನ್ ಖಾನ್ ನೊಂದ ಮನಸ್ಸಿನಿಂದ ಬರೆದ ಪತ್ರ ಓದಿದರೆ ಕಣ್ಣೀರು ಬರುವುದಂತು ಗ್ಯಾರಂಟಿ

Webdunia
ಗುರುವಾರ, 21 ಜೂನ್ 2018 (14:09 IST)
ಮುಂಬೈ : ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್ ಅವರು ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಅವರು ನೊಂದ ಮನಸ್ಸಿನಿಂದ ತಮ್ಮ ಅಭಿಮಾನಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ.


ನಟ ಇರ್ಫಾನ್ ಖಾನ್  ಅವರು ನ್ಯೂರೋಎಂಡೋಕ್ರೈನ್ ಟ್ಯೂಮರ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕೆ ಈಗ  ಲಂಡನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ಇದೀಗ ಅವರು ಕಣ್ಣೀರು ತರಿಸುವಂತಹ ಪತ್ರವೊಂದನ್ನು ಬರೆದಿದ್ದಾರೆ.
'ಕೆಲವು ಸಮಯದ ಹಿಂದೆಯಷ್ಟೇ ನನಗೆ ನ್ಯೂರೋ ಎಂಡೋಕ್ರೈನ್ ಕ್ಯಾನ್ಸರ್‌ ಇರುವುದು ತಿಳಿದು ಬಂತು, ನನಗೆ ಬಂದಿರುವುದು ಬಲು ಅಪರೂಪದ ಕಾಯಿಲೆ ಅಂತ ನನಗೆ ಗೊತ್ತು, ಇದರ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ, ಚಿಕಿತ್ಸೆ ಕುರಿತು ಏನೂ ಹೇಳಲು ಸಾಧ್ಯವಿಲ್ಲ. ನನ್ನ ಪ್ರಪಂಚ ನೋವಿನಿಂದ ತುಂಬಿದೆ. ನೋವೇ ದೇವರಿಗಿಂತ ದೊಡ್ಡದಾಗಿ ಕಾಣುತ್ತಿದೆ. ಪ್ರತಿಯೊಂದು ಗಿಡ, ಕೊಂಬೆ, ಎಲೆ, ಹೂ, ಪಕ್ಷಿ ಎಲ್ಲವೂ ನನ್ನಲ್ಲಿ ಅಚ್ಚರಿ, ಸಂತೋಷ, ಕುತೂಹಲ ಮೂಡಿಸುತ್ತಿದೆ. ಈಗ ನನಗೆ ಅರ್ಥವಾಗಿದೆ ಯಾವುದೇ ಅಲೆಗಳನ್ನು ನಿಯಂತ್ರಿಸಬೇಕಾಗಿಲ್ಲ, ಪ್ರಕೃತಿಯೊಂದಿಗೆ ಹೊಂದಿಕೊಂಡರಷ್ಟೇ ಸಾಕು'ಎಂದು ತಮ್ಮ ಮನದಾಳದ ನೋವನ್ನು ಅವರು ಹಂಚಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments