Select Your Language

Notifications

webdunia
webdunia
webdunia
webdunia

ಜಿಹಾದಿ ಶಾರುಖ್​ನ ಜೀವಂತ ಸುಡುತ್ತೇನೆ

ಜಿಹಾದಿ ಶಾರುಖ್​ನ ಜೀವಂತ ಸುಡುತ್ತೇನೆ
bangalore , ಬುಧವಾರ, 21 ಡಿಸೆಂಬರ್ 2022 (14:59 IST)
ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾದ ‘ಬೇಷರಂ ರಂಗ್​..’ ಹಾಡು ಸೃಷ್ಟಿ ಮಾಡಿರುವ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಬಿಕಿನಿ ಧರಿಸಿ ‘ಬೇಷರಂ ರಂಗ್​..’ (ನಾಚಿಕೆ ಇಲ್ಲದ ಬಣ್ಣ) ಎಂದು ಹೇಳಿದ್ದೇ ಈ ವಿವಾದ ಹುಟ್ಟಿಕೊಳ್ಳಲು ಕಾರಣ. ಅನೇಕರು ಈ ಸಿನಿಮಾ ಬ್ಯಾನ್ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಯೋಧ್ಯೆಯ ಸ್ವಾಮೀಜಿ ಒಬ್ಬರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾರುಖ್ ಖಾನ್ ಅವರನ್ನು ಜೀವಂತವಾಗಿ ಸುಡುತ್ತೇನೆ ಎಂಬುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಕೇಸರಿ ಬಣ್ಣ ಹಿಂದೂಗಳ ಪಾಲಿಗೆ ವಿಶೇಷ. ಆದರೆ, ‘ಬೇಷರಂ ರಂಗ್​..’ ಹಾಡಿನಲ್ಲಿ ಈ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಅನೇಕರು ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ. ಕೆಲವರು ಸಿನಿಮಾ ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಈಗ ಅಯೋಧ್ಯೆಯ ಪರಮಹಂಸ ಆಚಾರ್ಯ ಅವರು ಈ ಹಾಡಿನ ವಿವಾದದ ಕುರಿತು ಮಾತನಾಡಿದ್ದಾರೆ. ಅವರು ಶಾರುಖ್ ಖಾನ್ ವಿರುದ್ಧ ಕಿಡಿಕಾರಿದ್ದಾರೆ. ‘ನಮ್ಮ ಸನಾತನ ಧರ್ಮದ ಜನರು ಈ ವಿಚಾರದ ಬಗ್ಗೆ ನಿರಂತರವಾಗಿ ಪ್ರತಿಭಟಿಸುತ್ತಿದ್ದಾರೆ. ಇಂದು ನಾವು ಶಾರುಖ್ ಖಾನ್ ಅವರ ಪೋಸ್ಟರ್ ಅನ್ನು ಸುಟ್ಟು ಹಾಕಿದ್ದೇವೆ. ಜಿಹಾದಿ ಶಾರುಖ್ ಖಾನ್ ಅವರನ್ನು ಭೇಟಿ ಮಾಡುವ ಅವಕಾಶ ಸಿಕ್ಕರೆ ನಾನು ಅವರನ್ನು ಜೀವಂತವಾಗಿ ಸುಡುತ್ತೇನೆ’ ಎಂದು ಪರಮಹಂಸ ಆಚಾರ್ಯ ಎಚ್ಚರಿಸಿದ್ದಾರೆ ಎಂಬುದಾಗಿ ಎಐಎನ್​ಎಸ್​ ಸುದ್ದಿ ಸಂಸ್ಥೆ ವರದಿ ಮಾಡಿದೆ. ‘ಪಠಾಣ್ ಚಿತ್ರ ಥಿಯೇಟರ್​ನಲ್ಲಿ ರಿಲೀಸ್ ಆದರೆ ನಾನು ಆ ಸಿನಿಮಾ ಮಂದಿರಕ್ಕೆ ಬೆಂಕಿ ಇಡುತ್ತೇನೆ’ ಎಂದು ಕೂಡ ಪರಮಹಂಸ ಆಚಾರ್ಯ ಹೇಳಿದ್ದಾರೆ. ಅವರ ಹೇಳಿಕೆಗೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ಹೀರೋಗಳಿಗೆ ನಟಿ ರಮ್ಯಾ ಕಿವಿಮಾತು