Webdunia - Bharat's app for daily news and videos

Install App

ಬಾಲಿವುಡ್ ನಟ ಅಕ್ಷಯ್ ಕುಮಾರ್‌ಗೆ ಸಮನ್ಸ್ ಜಾರಿ

Webdunia
ಮಂಗಳವಾರ, 7 ಫೆಬ್ರವರಿ 2017 (10:34 IST)
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಜೈಪುರ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಮಾ.10ರೊಳಗೆ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ಆಕ್ಷೇಪಾರ್ಹವಾಗಿದ್ದು ವಕೀಲರ ವೃತ್ತಿಯನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ’ಜಾಲಿ ಎಲ್‌ಎಲ್‌ಬಿ 2’ ಚಿತ್ರದ ವಿರುದ್ಧ ಅರ್ಜಿದಾರರು ನ್ಯಾಾಯಾಲಯಕ್ಕೆ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
  
ಸುಭಾಷ್ ಕಪೂರ್ ನಿರ್ದೇಶನದ ಈ ಚಿತ್ರ 2013ರಲ್ಲಿ ಬಿಡುಗಡೆಯಾಗಿದ್ದ ಜಾಲಿ ಎಲ್‌ಎಲ್‌ಬಿ ಚಿತ್ರದ ಮುಂದುವರಿದ ಭಾಗವಾಗಿದೆ. ಅಕ್ಷಯ್ ಕುಮಾರ್ ಜತೆಗೆ ಹುಮಾ ಖುರೇಷಿ, ಸೌರಭ್ ಶುಕ್ಲಾ ಮತ್ತು ಅನ್ನು ಕಪೂರ್ ಚಿತ್ರದ ಪಾತ್ರವರ್ಗದಲ್ಲಿದ್ದಾರೆ.
 
ಈ ಹಿಂದೆಯೂ ಇದೇ ರೀತಿ ಆಕ್ಷೇಪ ವ್ಯಕ್ತಪಡಿಸಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ತ್ರಿಸದಸ್ಯ ಸಮಿತಿ  ಚಿತ್ರವನ್ನು ವೀಕ್ಷಿಸಿ ಚಿತ್ರ ಬಿಡುಗಡೆಗೆ ಅವಕಾಶ ಕಲ್ಪಿಸಬೇಕೆಂದು ಅರ್ಜಿದಾರರಾದ ಅಜಯ್ ಕುಮಾರ್ ವಾಗ್‌ಮಾರೆ ನ್ಯಾಯಾಲಯದ ಮೊರೆಹೋಗಿದ್ದರು.  ಚಿತ್ರದ ಶೀರ್ಷಿಕೆಯಲ್ಲಿನ ಎಲ್‌ಎಲ್‌ಬಿ ಪದವನ್ನು ಕೈಬಿಡುವಂತೆ ಅರ್ಜಿದಾರರು ಕೋರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments