Webdunia - Bharat's app for daily news and videos

Install App

ತುನಿಷಾ ಹತ್ಯೆ ಬಗ್ಗೆ ಕಂಗನಾ ಭಾವುಕ ಪೋಸ್ಟ್​​​​

Webdunia
ಶುಕ್ರವಾರ, 30 ಡಿಸೆಂಬರ್ 2022 (20:26 IST)
ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಮಾಡಿಕೊಳ್ಳುವ ಹದಿನೈದು ದಿನ ಮುನ್ನ ಬಾಯ್ ಫ್ರೆಂಡ್ ಶಿಜಾನ್ ಜೊತೆ ಲವ್ ಬ್ರೇಕ್ ಅಪ್ ಮಾಡಿಕೊಂಡಿದ್ದಳು ಎಂದು ಹೇಳಲಾಗಿದೆ. ಈ ಲವ್ ಬ್ರೇಕ್ ಅಪ್​​ಗೆ ಕಾರಣವನ್ನು ಅವನು ಹೇಳಿದ್ದು, ಲವ್ ಜಿಹಾದ್ ಭಯ ಮತ್ತು ಶ್ರದ್ಧಾ ವಾಕರ್ ಕೊಲೆಯಿಂದ ಬೇಸತ್ತು ದೂರವಾಗಿದ್ದೆ ಎಂದಿದ್ದ. ಈ ಪ್ರಕರಣದ ಕುರಿತಾಗಿ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ನಟಿ ಕಂಗನಾ ರಣಾವತ್ ಸಹ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಕುರಿತು ಭಾವುಕ ಪೋಸ್ಟ್​​​ವೊಂದನ್ನು ಬರೆದುಕೊಂಡಿದ್ದಾರೆ. ‘ಮಹಿಳೆ ಎಲ್ಲವನ್ನೂ ನಿಭಾಯಿಸಬಲ್ಲಳು, ಕಳೆದುಕೊಂಡ ಪ್ರೀತಿ, ಮದುವೆ, ಸಂಬಂಧ ಹೀಗೆ ಎಲ್ಲವನ್ನೂ ನಿಭಾಯಿಸಬಹುದು. ಆದರೆ ಅವಳ ಲವ್ ಸ್ಟೋರಿ ಎಂದಿಗೂ ಪ್ರೀತಿಯನ್ನು ಹೊಂದಿಲ್ಲ ಎಂಬ ಅಂಶವನ್ನು ಅವಳು ಎಂದಿಗೂ ನಿಭಾಯಿಸಲು ಸಾಧ್ಯವಿಲ್ಲ. ನಾನು ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಲ್ಲಿ ವಿನಂತಿಸುತ್ತೇನೆ. ಕೃಷ್ಣ ದ್ರೌಪದಿಗೆ ಸಹಾಯ ಮಾಡಿದಂತೆ, ನಾವು ನಿಮ್ಮಲ್ಲಿ ಒಪ್ಪಿಗೆ ಇಲ್ಲದ ಬಹುಪತ್ನಿತ್ವ ವಿರುದ್ಧ ಬಲವಾದ ಕಾನೂನು ಮಾಡುತ್ತೀರಿ ಎಂದು ನಿರೀಕ್ಷೆ ಇಟ್ಟಿದ್ದೀವಿ. ಮಹಿಳೆಯರ ಮೇಲೆ ಆ್ಯಸಿಡ್ ದಾಳಿ, ಮಹಿಳೆಯನ್ನು ಅನೇಕ ತುಂಡು ತುಂಡುಗಳಾಗಿ ಕತ್ತರಿಸುವುದು ಇಂತವರಿಗೆ ತಕ್ಷಣ ಮರಣದಂಡನೆ ಶಿಕ್ಷೆ ವಿಧಿಸಬೇಕು’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments