Select Your Language

Notifications

webdunia
webdunia
webdunia
webdunia

ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ತಂಡದವರಿಗೆ ಹೀಯಾಳಿಸಿದ ಕುವೈಟ್ ವಿಮಾನ ನಿಲ್ದಾಣದ ಅಧಿಕಾರಿಗಳು

ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ತಂಡದವರಿಗೆ ಹೀಯಾಳಿಸಿದ ಕುವೈಟ್ ವಿಮಾನ ನಿಲ್ದಾಣದ ಅಧಿಕಾರಿಗಳು
ನವದಿಲ್ಲಿ , ಮಂಗಳವಾರ, 8 ಮೇ 2018 (07:11 IST)
ನವದಿಲ್ಲಿ : ಖ್ಯಾತ ಗಾಯಕ ಅದ್ನಾನ್ ಸಾಮಿ ಹಾಗೂ ಅವರ ತಂಡದವರಿಗೆ ಕುವೈಟ್ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಹೀಯಾಳಿಸಿ ಅವಮಾನ ಮಾಡಿದ ಘಟನೆ ನಡೆದಿದೆ.


ಈ ಬಗ್ಗೆ ಟ್ವೀಟ್ ಮಾಡಿರುವ ಖ್ಯಾತ ಗಾಯಕ ಅದ್ನಾನ್ ಸಾಮಿ ಅವರು,’ ದೇಶಕ್ಕೆ ಪ್ರೀತಿ ಹಾಗೂ ಸಹೋದರ ಭಾವನೆಯಿಂದ ಬಂದಿದ್ದೆವು. ಆದರೆ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತುಂಬಾ ಕೆಟ್ಟದಾಗಿ ನಡೆಸಿಕೊಂಡರು. ಭಾರತೀಯ ನಾಯಿಗಳೆಂದು ಹೀಯಾಳಿಸಿದರು. ಕುವೈಟ್ ನವರಿಗೆ ಹೀಗೆ ವರ್ತಿಸಲು ಎಷ್ಟು ಧೈರ್ಯ ಎಂದು ಬರೆದು ಅದನ್ನು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಗೂ ಸುಶ್ಮಾ ಸ್ವರಾಜ್ ಅವರಿಗೆ ಟ್ವೀಟ್ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು,’ ಸುಷ್ಮಾ ಸ್ವರಾಜ್ ಅವರು ಈ ವಿಚಾರವಾಗಿ ಗಮನ ಹರಿಸಿದ್ದಾರೆ ಎಂದು ಬರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೃಷ್ಣಮೃಗಗಳ ಬೇಟೆ ಪ್ರಕರಣ ; ಸಲ್ಮಾನ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಮುಂದೂಡಿದ ಜೋಧ್‌ಪುರ ನ್ಯಾಯಾಲಯ