Select Your Language

Notifications

webdunia
webdunia
webdunia
webdunia

ಮಹಾದಾಯಿ ತೀರ್ಪಿನ ವಿರುದ್ಧ ಧ್ವನಿಯೆತ್ತಲಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್‌ಗಳು

ಮಹಾದಾಯಿ ತೀರ್ಪಿನ ವಿರುದ್ಧ ಧ್ವನಿಯೆತ್ತಲಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್‌ಗಳು
ಬೆಂಗಳೂರು , ಶನಿವಾರ, 30 ಜುಲೈ 2016 (09:15 IST)
ಮಹದಾಯಿ ನ್ಯಾಯಾಧೀಕರಣ ತೀರ್ಪು ವಿರೋಧಿಸಿ, ರೈತ ಸಂಘಟನೆಗಳ, ವಿವಿಧ ಕನ್ನಡಪರ ಹೋರಾಟಗಾರರು ಸೇರಿದಂತೆ ಅನೇಕ ಸಂಘಟನೆಗಳು ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ವಿವಿಧ ಸಂಘಟನೆಗಳು ಕರೆ ನೀಡಿರುವ ಈ ಬಂದ್ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿವೆ.

ಈ ಹಿಂದೆ ಕಳಸಾ ಬಂಡೂರಿ ಯೋಜನೆ ಕುರಿತು ಪ್ರತಿಭಟನೆ ನಡೆದಾಗ ಕನ್ನಡ ಚಿತ್ರರಂಗ ಅನ್ನದಾತರ ಪರ ಧ್ವನಿ ಎತ್ತಿತ್ತು.ಆದ್ರೆ ಆ ಬಳಿಕ ಕನ್ನಡಚಿತ್ರರಂಗ ನಮ್ಮ ಕಡೆ ಮುಖಾನೇ ಮಾಡಿಲ್ಲ ಅನ್ನೋ ಆರೋಪಗಳು ಅನ್ನದಾತರಿಂದ ಕೇಳಿ ಬಂದಿತ್ತು. ಇದೀಗ ತೀರ್ಪು ವಿರೋಧಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರತಿಭಟನೆ ತೀಪ್ರ ಸ್ವರೂಪ ಪಡೆದುಕೊಂಡಿದೆ.

ಹೀಗಿರುವಾಗಲೇ ಇವತ್ತು ಕರ್ನಾಟಕ ಬಂದ್ ಗೂ ಕರೆ ನೀಡಲಾಗಿದೆ.ಇನ್ನು ಕನ್ನಡ ಚಿತ್ರರಂಗವೂ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದೆ ರಾಜ್ಯಾದ್ಯಂತ ಚಿತ್ರ ಪ್ರದರ್ಶನ, ಚಿತ್ರೀಕರಣ, ಸೇರಿದಂತೆ ಚಿತ್ರೋದ್ಯಮದ ಎಲ್ಲಾ ಚಟುವಟಿಕೆಗಳನ್ನು ಬಂದ್ ಮಾಡಲಾಗುವುದು. ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಪ್ರಮುಖರಾದ ಸಾ.ರಾ.ಗೋವಿಂದು, ಶಿವರಾಜ್ ಕುಮಾರ್, ವಾಟಾಳ್ ನಾಗರಾಜ್ ಮೊದಲಾದವರು ಭಾಗವಹಿಸಲಿದ್ದಾರೆ.

ಇನ್ನು ಕನ್ನಡ ಚಿತ್ರರಂಗ ಅನೇಕ ನಟ ನಟಿಯರು ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.ಈಗಾಗಲೇ ನಟರಾದ ಶಿವರಾಜ್ ಕುಮಾರ್, ನಟಿಯರಾದ ಪೂಜಾ ಗಾಂಧಿ ಅವರು ಯೋಜನೆ ವಿರೋಧಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಅಂತಾ ಹೇಳಿದ್ದಾರೆ. ಇದೀಗ ಇವತ್ತು ನಡೆಯುತ್ತಿರುವ ಬಂದ್ ನಲ್ಲಿ ಯಾರೆಲ್ಲಾ ಭಾಗಿಯಾಗುತ್ತಾರೆ ಕಾದು ನೋಡ್ಬೇಕು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

Share this Story:

Follow Webdunia kannada

ಮುಂದಿನ ಸುದ್ದಿ

ಆಗಸ್ಟ್ 5 ಕ್ಕೆ ಮುಂಗಾರು ಮಳೆ ಸಿನಿಮಾಡ ಆಡಿಯೋ ರಿಲೀಸ್