Webdunia - Bharat's app for daily news and videos

Install App

ಪ್ರವಾಹದಿಂದಾಗಿ ಬೆಂಗಳೂರಿಗೆ ಆಗಮಿಸಿದ ಸುಹಾಸಿನಿ ಹಾಗೂ ಮಣಿರತ್ನಂ

Webdunia
ಸೋಮವಾರ, 7 ಡಿಸೆಂಬರ್ 2015 (11:14 IST)
ಚೆನ್ನೈನಲ್ಲಿ ಉಂಟಾಗಿರುವ ಪ್ರವಾಹ ಅಲ್ಲಿನ ಜನರ ಬದುಕನ್ನು ಮೂರಾಬಟ್ಟೆಯನ್ನಾಗಿಸಿದೆ. ಈಗಾಗಲೇ ಪ್ರವಾಹಕ್ಕೆ ಹೆದರಿ ಅನೇಕರು ಚೆನ್ನೈ ಬಿಟ್ಟು ಬೇರೆ ಬೇರೆ ಊರುಗಳಿಗೆ ಪ್ರಯಾಣ ಬೆಳೆಸಿದ್ದಾರೆ. ಇನ್ನು ಪ್ರವಾಹದ ಬಿಸಿ ಸಿನಿಮಾ ತಾರೆಯರನ್ನು ಬಿಟ್ಟಿಲ್ಲ.ಪ್ರವಾಹದಿಂದಾಗಿ ಮಣಿರತ್ನಂ ಹಾಗೂ ಸುಹಾಸಿನಿ ದಂಪತಿ ಇದೀಗ ಬೆಂಗಳೂರಿಗೆ ಶಿಫ್ಟ್ ಆಗಿದ್ದಾರೆ.


ಪ್ರವಾಹದಿಂದಾಗಿ ಚೆನ್ನೈನ ಚಿತ್ರಣ ಸಂಪೂರ್ಣವಾಗಿ ಬದಲಾಗಿ ಹೋಗಿದೆ. ಚೆನ್ನೈ ಮತ್ತೆ ಮೊದಲಿನಂತೆ ಆಗಲೂ ಇನ್ನೂ ಕೆಲವು ದಿನಗಳು ಬೇಕಾಗುತ್ತದೆ. ಹಾಗಾಗಿ ಅಷ್ಟರವರೆಗೆ ಚೆನ್ನೈನಲ್ಲಿ ಇರೋದು ಕಷ್ಟವಾದ್ದರಿಂದ ಸುಹಾಸಿನಿ ಹಾಗೂ ಮಣಿರತ್ನಂ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ತಮ್ಮ ಕೆಲ ಸ್ನೇಹಿತರ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ನಟ ಅಂಬರೀಶ್ ಅವರ ಮನೆಗೂ ಮಣಿರತ್ನಂ ದಂಪತಿ ಭೇಟಿ ನೀಡಿದ್ದಾರೆ.

ಇನ್ನು ಸುಹಾಸಿನಿ ಹಾಗೂ ಮಣಿರತ್ನಂ ಅವರು ತಮ್ಮ ಮನೆಗೆ ಭೇಟಿ ನೀಡಿರೋ ಫೋಟೋ ಒಂದನ್ನು ಸುಮಲತಾ ಅವರು ಟ್ವಿಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೇ ಫೋಟೋದ ಬಗ್ಗೆ ಹೇಳಿರುವ ಅವರು ಚೆನ್ನೈನ ಮಳೆ ಕೆಲ ಸ್ನೇಹಿತರನ್ನು ಬೆಂಗಳೂರಿಗೆ ಬರುವಂತೆ ಮಾಡಿದೆ. ಚೆನ್ನೈ ಇನ್ನು ಕೆಲವೇ ದಿನಗಳಲ್ಲಿ ಮೊದಲಿನಂತಾಗುತ್ತೆ. ಮಹಾ ನಗರ ಕೆಲವೇ ದಿನಗಳಲ್ಲಿ ಸಹಜ ಸ್ಥಿತಿಯತ್ತ ಬರುತ್ತೆ ಅನ್ನೋ ನಂಬಿಕೆ ನನಗಿದೆ ಅಂತಾ ಅವರು ಹೇಳಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments