Webdunia - Bharat's app for daily news and videos

Install App

ಮಾಸ್ತಿ ಗುಡಿ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿದ ಸೋನು ನಿಗಂ

Webdunia
ಬುಧವಾರ, 9 ನವೆಂಬರ್ 2016 (12:23 IST)
ಮುಂಬೈ: ಮಾಸ್ತಿ ಗುಡಿ ಕ್ಲೈಮಾಕ್ಸ್ ದೃಶ್ಯದ ಚಿತ್ರೀಕರಣದ ವೇಳೆ ಸಾವನ್ನಪ್ಪಿದ ಕನ್ನಡದ ಖಳ ನಟರಾದ ಉದಯ್ ಮತ್ತು ಅನಿಲ್ ಸಾವಿಗೆ ಬಾಲಿವುಡ್ ಗಾಯಕ ಸೋನು ನಿಗಂ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಕನ್ನಡದ ಇಬ್ಬರು ನಟರು ದುರಂತಕ್ಕೀಡಾಗುವ ವಿಡಿಯೋ ನೋಡಿದ್ದೇನೆ. ಅವರಿಬ್ಬರೂ ಈಜು ಬರುವುದಿಲ್ಲ ಎಂದ ಮೇಲೆಯೂ ಅವರಿಂದ ಈ ಸಾಹಸ ಮಾಡಿಸಿದ್ದಾರೆಂದರೆ ಅದು ಅವಗಣನೆಯ ಫಲವಷ್ಟೇ. ಭಾರತೀಯ ಸಿನಿಮಾ ರಂಗದಲ್ಲಿ ಇನ್ನೂ ಕಲಾವಿದರ ಸುರಕ್ಷತೆಗೆ ತಕ್ಕ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಅವರು ಖೇದ ವ್ಯಕ್ತಪಡಿಸಿದ್ದಾರೆ.

ತಾವು ಇತ್ತೀಚೆಗೆ ನಟಿಸಿದ ಭಾರತ-ಚೀನಾ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಜಾಕಿ ಜಾನ್ ಚಿತ್ರ “ಕುಂಗ್ ಫು ಯೋಗ” ದ ಬಗ್ಗೆ ಉಲ್ಲೇಖಿಸಿದ ಸೋನು ನಿಗಂ “ಈ ಚಿತ್ರದ ಸೆಟ್ ನಲ್ಲಿ ಆಂಬ್ಯುಲೆನ್ಸ್ ಮತ್ತು ವೈದ್ಯರ ತಂಡ ಇಲ್ಲದ ದಿನವಿಲ್ಲ. ಅವರು ಅಷ್ಟೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದರು. ಇದು ಭಾರತೀಯ ಸಿನಿಮಾಗಳಲ್ಲೂ ಆಗಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments