Select Your Language

Notifications

webdunia
webdunia
webdunia
webdunia

ಮುಕುಂದಾ ಮುರಾರಿ ಚಿತ್ರದಲ್ಲಿ ಕೃಷ್ಣನ ಅವತಾರದಲ್ಲಿ ಸುದೀಪ್

ಮುಕುಂದಾ ಮುರಾರಿ ಚಿತ್ರದಲ್ಲಿ ಕೃಷ್ಣನ ಅವತಾರದಲ್ಲಿ ಸುದೀಪ್
ಬೆಂಗಳೂರು , ಬುಧವಾರ, 31 ಆಗಸ್ಟ್ 2016 (16:49 IST)
ಮುಕುಂದ ಮುರಾರಿ ಚಿತ್ರದಲ್ಲಿ ಕೃಷ್ಣನ ಅವತಾರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಸುದೀಪ್ -ಉಪೇಂದ್ರ ಅಭಿನಯದ 'ಮುಕುಂದ ಮುರಾರಿ' ಚಿತ್ರಕ್ಕಾಗಿ ಅಭಿಮಾನಿಗಳಿಗೆ ಕ್ಯೂರಿಯಾಸಿಟಿ ಹೆಚ್ಚಿದೆ. ಮುಕುಂದನ ಹಾಗೂ ಕೃಷ್ಣನ ಲೀಲೆಗಳನ್ನು  ತೆರೆ ಮೇಲೆ ನೋಡಲು ಕಾತುರರಾಗಿದ್ದಾರೆ. ವಿಶೇಷವೆಂದರೆ ಸುದೀಪ್ ಶ್ರೀ ಕೃಷ್ಣನ ಪಾತ್ರ ಮಾಡಿದ್ರೆ, ಉಪ್ಪಿ ನಾಸ್ತಿಕನ ಪಾತ್ರದಲ್ಲಿ ಮಿಂಚಲಿದ್ದಾರೆ. 


ಸುದೀಪ್ ಹಾಗೂ ಉಪೇಂದ್ರ ಅಭಿನಯದ 'ಮುಕುಂದಾ ಮುರಾರಿ' ಚಿತ್ರದ ಕೊನೆಯ ಹಂತದ ಕೆಲಸದಲ್ಲಿ ಚಿತ್ರತಂಡ ಬ್ಯೂಸಿಯಾಗಿದೆ. ಕಿಚ್ಚ ಸುದೀಪ್ ಅವರು ಹುಟ್ಟುಹಬ್ಬದ ದಿನದಂದು ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ನಿಖಿತಾ ತುಕ್ರಾಲ್ ಉಪ್ಪಿ ಅವರ ಪತ್ನಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 
 
'ಮುಕುಂದ ಮುರಾರಿ' ಸಿನಿಮಾದ ಆಡಿಯೋ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಸೆ. 2 ಸುದೀಪ್ ಅವರ ಹುಟ್ಟು ಹಬ್ಬದ ದಿನದಂದು ಚಿತ್ರದ ಬಿಡುಗಡೆಗೊಳ್ಳಲಿದೆ.

ಆ ದಿನದಂದು ಚಿತ್ರದ ಆಡಿಯೋ ಬಿಡುಗಡೆ ಮಾಡುವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ನಿರ್ದೇಶಕ ನಂದಕಿಶೋರ್ ಪ್ಲ್ಯಾನ್ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಒಂದಾದ ನಟ ಸುದೀಪ್- ರಾಗಿಣಿ ದ್ವಿವೇದಿ