Webdunia - Bharat's app for daily news and videos

Install App

ಮುರಳಿ ಮುಂದಿನ ಚಿತ್ರದ ಟೈಟಲ್ ಗಣೇಶ್ ಚತುರ್ಥಿಗೆ ಘೋಷಣೆ

Webdunia
ಶುಕ್ರವಾರ, 2 ಸೆಪ್ಟಂಬರ್ 2016 (15:34 IST)
ಉಗ್ರಂ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ತನ್ನ ಸ್ಥಾನವನ್ನು ಭದ್ರವಾಗಿಸಿಕೊಂಡ ನಟ ಶ್ರೀಮುರಳಿ ಈ ಹಿಂದೆ ತೆರೆಕಂಡ ತಮ್ಮ ಸಿನಿಮಾಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದರು.ಇದೀಗ ತಮ್ಮ ಮುಂದಿನ ಸಿನಿಮಾದಲ್ಲೂ ಮುರಳಿ ಅವರು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.ಗಣೇಶ ಚತುರ್ಥಿ ಹಬ್ಬಕ್ಕೆ ಮುರಳಿ ಮುಂದಿನ ಚಿತ್ರದ ಘೋಷಣೆ ಮಾಡಲಾಗುವುದು ಎಂದು ಸ್ಯಾಂಡಲ್‌ವುಡ್ ನಟ ಮುರುಳಿ ತಿಳಿಸಿದ್ದಾರೆ. 

ನಟ ಮುರಳಿ ಮುಂದಿನ ಚಿತ್ರದ ಟೈಟಲ್ ಅನೌನ್ಸ್ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ನಟ ಮುರಳಿ ಅವರೇ ಖಚಿತಪಡಿಸಿದ್ದು, ಹಬ್ಬದಂದು ಚಿತ್ರದ ಟೈಟಲ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆಯಂತೆ.
 
ಮೂಲಗಳ ಪ್ರಕಾರ ಸಿನಿಮಾ ಟೈಟಲ್ 'ಮುಫ್ತಿ' ಎಂದು ಈಡಲಾಗಿತ್ತು. ಟೈಟಲ್ ಬಗ್ಗೆ ಜಯಣ್ಣ ಮುಫ್ತಿ ಎಂದು ಇಟ್ಟಿದ್ರಂತೆ. ಆದರೆ ಚಿತ್ರತಂಡ ಇದೀಗ ಸಿನಿಮಾದ ಟೈಟಲ್ ಬದಲಾವಣೆ ಮಾಡುತ್ತಿದೆ. ಹಬ್ಬಕ್ಕೆ ಹೊಸ ಟೈಟಲ್ ಘೋಷಣೆ ಮಾಡುವುದರ ಬಗ್ಗೆ ಖಚಿತ ಪಡಿಸಿದ್ದಾರೆ. 

ಶ್ರೀಮುರಳಿ ಅವರ ಮುಂದಿನ ಸಿನಿಮಾದಲ್ಲಿ ಶಿವರಾಜಕುಮಾರ್ ಜತೆಗೆ ಕಾಣಿಸಿಕೊಳ್ಳುತ್ತಾರೆ ಎನ್ನಲಾಗುತ್ತಿದೆ.ಅಂದ್ಹಾಗೆ ಮುರುಳಿ ಸಿನಿಮಾವನ್ನು ನರ್ತನ್ ಅವರು ನಿರ್ದೇಶನ ಮಾಡುತ್ತಿದ್ದಾರೆ.ಈಗಾಗಲೇ ಸಿನಿಮಾದ ಸ್ಕ್ರಿಫ್ಟ್ ಕೆಲಸಗಳು ಮುಗಿದ್ದಿದ್ದು, ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.ಅತೀ ಶೀಘ್ರದಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments