Select Your Language

Notifications

webdunia
webdunia
webdunia
webdunia

ಆರ್ಯನ್ ಖಾನ್ ಬಂಧಿಸಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹಿಂಬಾಲಿಸುತ್ತಿರುವ ಆಗಂತುಕ!

ಆರ್ಯನ್ ಖಾನ್ ಬಂಧಿಸಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹಿಂಬಾಲಿಸುತ್ತಿರುವ ಆಗಂತುಕ!
ಮುಂಬೈ , ಮಂಗಳವಾರ, 12 ಅಕ್ಟೋಬರ್ 2021 (10:16 IST)
ಮುಂಬೈ: ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ ವಿಐಪಿಗಳ ಮೇಲೆ ದಾಳಿ ಮಾಡಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಈಗ ತಮ್ಮನ್ನು ಯಾರೋ ಹಿಂಬಾಲಿಸುತ್ತಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಡ್ರಗ್ ಕೇಸ್ ನಲ್ಲಿ ಆರ್ಯನ್ ಖಾನ್ ಸೇರಿದಂತೆ ಇತರರನ್ನು ಬಂಧಿಸಿದ್ದ ಸಮೀರ್ ವಾಂಖೆಡೆ ಈ ಸಂಬಂಧ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಮುಫ್ತಿಯಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರು ತಮ್ಮನ್ನು ಹಿಂಬಾಲಿಸುತ್ತಿದ್ದು, ತನ್ನ ಚಲನವಲನಗಳನ್ನು ಗಮನಿಸುತ್ತಿದ್ದಾರೆ ಎಂದು ಸಮೀರ್ ಆರೋಪಿಸಿದ್ದಾರೆ.

ಆರ್ಯನ್ ಮತ್ತು ಸಹಚರರನ್ನು ಬಂಧಿಸಿದಾಗ ಶಿವಸೇನೆ, ಕಾಂಗ್ರೆಸ್ ಸೇರಿದಂತೆ ಕೆಲವು ರಾಜಕೀಯ ನಾಯಕರೇ ಎನ್ ಸಿಬಿ ಅಧಿಕಾರಿಗಳ ದಾಳಿ ನಕಲಿ ಎಂದು ಆರೋಪಿಸಿದ್ದರು. ಈಗ ಸಮೀರ್ ವಾಂಖೆಡೆ ಮೇಲೆ ಹದ್ದಿನಗಣ್ಣಿಟ್ಟಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದರ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಶಾಲೆಯಲ್ಲಿ ಪಾಠ ಮಾಡಲಿದ್ದಾರೆ ಪ್ರಿಯಾಂಕ ಉಪೇಂದ್ರ!