ಅಂಗಾಂಗ ದಾನ ಘೋಷಣೆ ಮಾಡಿದ ಜೆನಿಲಿಯಾ-ರಿತೇಶ್ ದೇಶ್ ಮುಖ್ ದಂಪತಿ

Krishnaveni K
ಸೋಮವಾರ, 8 ಜುಲೈ 2024 (12:08 IST)
ಮುಂಬೈ: ಬಾಲಿವುಡ್ ನ ಖ್ಯಾತ ನಟ ರಿತೇಶ್ ದೇಶ್ ಮುಖ್-ಜೆನಿಲಿಯಾ ಡಿಸೋಜಾ ದಂಪತಿ ತಮ್ಮ ಸಾವಿನ ಬಳಿಕ ಅಂಗಾಂಗ ದಾನ ಮಾಡುವ ಘೋಷಣೆ ಮಾಡಿದ್ದಾರೆ. ಸೆಲೆಬ್ರಿಟಿ ದಂಪತಿಯ ಈ ನಿರ್ಧಾರಕ್ಕೆ ಎಲ್ಲರ ಮೆಚ್ಚುಗೆ ವ್ಯಕ್ತವಾಗಿದೆ.

ರಿತೇಶ್ ಮತ್ತು ಜೆನಿಲಿಯಾ ಸಿನಿ ಲೋಕದ ಐಡಿಯಲ್ ಕಪಲ್. ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದು ಈಗ ಇಬ್ಬರು ಗಂಡು ಮಕ್ಕಳ ಪೋಷಕರಾಗಿದ್ದಾರೆ. ಅನೇಕ ಸಮಾಜಮುಖೀ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಜೋಡಿ ಈಗ ಅಂಗಾಂಗ ದಾನ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಓರ್ವ ವ್ಯಕ್ತಿ ತಮ್ಮ ಅಂಗಾಂಗ ದಾನ ಮಾಡುವ ಬಗ್ಗೆ ಬದುಕಿದ್ದಾಗಲೇ ಘೋಷಣೆ ಮಾಡಬೇಕು. ಅದರಂತೆ ಈಗ ಜೆನಿಲಿಯಾ ಮತ್ತು ರಿತೇಶ್ ಇಂತಹದ್ದೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಇವರ ನಿರ್ಧಾರಕ್ಕೆ ರಾಷ್ಟ್ರೀಯ ಅಂಗ ಮತ್ತು ಕಸಿ ಸಂಸ್ಥೆ ಧನ್ಯವಾದ ಸಲ್ಲಿಸಿದೆ.

ಬದುಕಿದ್ದಾಗಲೇ ಇಂತಹದ್ದೊಂದು ಒಪ್ಪಂದಕ್ಕೆ ಸಹಿ ಹಾಕಿದರೆ ಸಾವಿನ ಬಳಿಕ ಮೃತ ವ್ಯಕ್ತಿಯ ಕಣ್ಣು ಮೊದಲಾದ ಅಂಗಾಂಗಗಳನ್ನು ಪಡೆದುಕೊಳ್ಳಲಾಗುತ್ತದೆ. ಇದರಿಂದ ಎಷ್ಟೋ ಜನರ ಜೀವ, ಜೀವನ ಉಳಿಸಬಹುದಾಗಿದೆ. ರಿತೇಶ್ ಮತ್ತು ಜೆನಿಲಿಯಾ ಈಗ ಅಂತಹದ್ದೇ ಒಂದು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments