Webdunia - Bharat's app for daily news and videos

Install App

ಯುಪಿ ಸಿಎಂ ಅಖಿಲೇಶ್ ಯಾದವ್‌ಗೆ ಧನ್ಯವಾದ ತಿಳಿಸಿದ ಸಲ್ಮಾನ್

Webdunia
ಶನಿವಾರ, 30 ಏಪ್ರಿಲ್ 2016 (17:40 IST)
ಬಾಲಿವುಡ್ ನಟ ಸಲ್ಮಾನ್ ಖಾನ್ ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ಗೆ ಧನ್ಯವಾದ ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಶೂಟಿಂಗ್ ವೇಳೆ ಸಾಕಷ್ಟು ಎಂಜಾಯ್ ಮಾಡಿದ್ದೇನೆ ಎಂದು ತಿಳಿಸಿದ್ದಾರೆ ಸಲ್ಲು. 
ಸುಲ್ತಾನ್ ಶೂಟಿಂಗ್ ಯಶಸ್ವಿಯಾಗಿ ನಡೆಸಿದ್ದೇವೆ. ಮುಜಾಫರ್ ನಗರದಲ್ಲಿ ಶೂಟಿಂಗ್ ನಡೆಸಲಾಗಿದ್ದು, ಸಿಎಂ ಅಖಿಲೇಶ್ ಯಾದವ್ ಹಾಗೂ ಇಲ್ಲಿನ ಜನರ ಪ್ರೋತ್ಸಾಹವಿಲ್ಲದೇ ಸಾಧ್ಯವಿರಲಿಲ್ಲ. ಇದ್ದರಿಂದ ನಾವೆಲ್ಲ ತುಂಬಾ ಎಂಜಾಯ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ ಸಲ್ಮಾನ್..
 
ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಶೂಟಿಂಗ್ ಗಾಗಿ ತೆರಳಿದ್ದ ಸಲ್ಮಾನ್ ಗಾಗಿ ಬಿಗಿ ಭತ್ರತೆ ಒದಗಿಸಲಾಗಿತ್ತು. ಫಾರ್ಮ್‌ಹೌಸ್‌ಗೆ ಬಂದಿದ್ದ ಸಲ್ಲು, ಅಲ್ಲಿ ಪಬ್ಲಿಕ್‌ಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಅಲ್ಲದೇ 20 ಖಾಸಗಿ ಸೆಕ್ಯೂರಿಟಿ ಗಾರ್ಡ್‌ಗಳನ್ನು ನಿಯೋಜಿಸಲಾಗಿತ್ತು.
 
ಸುಲ್ತಾನ್ ಚಿತ್ರವನ್ನು ಅಲಿ ಅಬ್ಬಾಸ್ ಜಫರ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕುಸ್ತಿಪಟು ಪಾತ್ರಕ್ಕಾಗಿ ಸಲ್ಮಾನ್ ಸಾಕಷ್ಟು ತರಬೇತಿ ಪಡೆಯುತ್ತಿದ್ದಾರಂತೆ. ಯಶ್‌ರಾಜ್ ಬ್ಯಾನರ್‌ನಲ್ಲಿ ಮೂಡಿ ಬರುತ್ತಿರುವ ಸುಲ್ತಾನ್ ಚಿತ್ರದಲ್ಲಿ ಅನುಶ್ಕಾ ಶರ್ಮಾ ಸೇರಿದಂತೆ ಹಲವರು ಇದ್ದಾರೆ. ಈದ್ ಹಬ್ಬದಂದು ಚಿತ್ರ ರಿಲೀಸ್ ಆಗಲಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments