Publish Date: Tue, 31 May 2022 (10:42 IST)
Updated Date: Tue, 31 May 2022 (10:45 IST)
ನವದೆಹಲಿ: ಡ್ರಗ್ಸ್ ಕೇಸ್ ಗೆ ಸಂಬಂಧಪಟ್ಟಂತೆ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರನ್ನು ಬಂಧಿಸಿದ್ದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆಯನ್ನು ತಮಿಳುನಾಡಿಗೆ ವರ್ಗಾಯಿಸಲಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಆರ್ಯನ್ ರನ್ನು ಎನ್ ಸಿಬಿ ಆರೋಪ ಮುಕ್ತಗೊಳಿಸಿತ್ತು. ಈ ಪ್ರಕರಣದಲ್ಲಿ ಸಮೀರ್ ವಾಂಖೆಡೆ ಸರಿಯಾಗಿ ನಡೆದುಕೊಂಡಿಲ್ಲ ಎಂಬ ಕಾರಣಕ್ಕೆ ಅವರನ್ನು ವಿಚಾರಣೆಯಿಂದ ಹೊರಗಿಡಲಾಗಿತ್ತು.
ಇದೀಗ ಸಮೀರ್ ವಾಂಖೆಡೆಯನ್ನು ತೆರಿಗೆ ಇಲಾಖೆಗೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಡ್ರಗ್ಸ್ ಕೇಸ್ ನಲ್ಲಿ ಅಸಮರ್ಕ ತನಿಖೆ ನಡೆಸಿದ ಕಾರಣಕ್ಕೆ ಅವರ ವಿರುದ್ಧ ತನಿಖೆ ಜಾರಿಯಲ್ಲಿದೆ.