Webdunia - Bharat's app for daily news and videos

Install App

ಅನಂತ್ ಅಂಬಾನಿ ಜೊತೆ ಜೈಶ್ರೀರಾಮ್ ಎಂದ ಶಾರುಖ್ ಖಾನ್

Krishnaveni K
ಸೋಮವಾರ, 4 ಮಾರ್ಚ್ 2024 (11:05 IST)
ಜಾಮ್ ನಗರ: ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್ ಕಾರ್ಯಕ್ರಮದ ವೇದಿಕೆಯಲ್ಲಿ ನಟ ಶಾರುಖ್ ಖಾನ್ ಜೈಶ್ರೀರಾಮ್ ಘೋಷಣೆ ಕೂಗಿದ್ದು ಎಲ್ಲರ ಗಮನ ಸೆಳೆದಿದೆ.

ಗುಜರಾತ್ ನ ಜಾಮ್ ನಗರದಲ್ಲಿ ನಡೆದ ಪ್ರಿ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ದೇಶ-ವಿದೇಶದ ವಿವಿಧ ಕ್ಷೇತ್ರದ ಗಣ್ಯರು ಆಗಮಿಸಿದ್ದರು. ಇಡೀ ಬಾಲಿವುಡ್ ತಾರೆಯರ ದಂಡೇ ಜಾಮ್ ನಗರದಲ್ಲಿ ಬೀಡು ಬಿಟ್ಟಿತ್ತು. ಖ್ಯಾತನಾಮರಿಂದ ಮನರಂಜನಾ ಕಾರ್ಯಕ್ರಮಗಳೂ ನಡೆದಿತ್ತು.

ಸ್ವತಃ ಶಾರುಖ್ ಖಾನ್ ನಿರೂಪಕರಾಗಿ ಅಂಬಾನಿ ಕುಟುಂಬದವರನ್ನು ವೇದಿಕೆ ಮೇಲೆ ಕರೆದು ಮಾತನಾಡಿಸಿದ್ದಲ್ಲದೆ, ಡ್ಯಾನ್ಸ್ ಗೆ ಹೆಜ್ಜೆ ಹಾಕಿದರು. ಈ ವೇಳೆ ಮದುಮಗ ಅನಂತ್ ಅಂಬಾನಿಯನ್ನು ಮಾತನಾಡಿಸಿದ್ದರು. ಅನಂತ್ ಅಂಬಾನಿ ಮಾತಿನ ನಡುವೆ ತಮ್ಮ ಕುಟುಂಬದ ದೈವ ಭಕ್ತಿಯ ಬಗ್ಗೆ ಹೇಳಿಕೊಂಡರು. ಎಲ್ಲವೂ ಆ ಭಗವಾನ್ ಶ್ರೀರಾಮ ಕೃಪೆ ಎಂದರು. ಅನಂತ್ ಹೀಗೆ ಹೇಳುತ್ತಿದ್ದಂತೇ ಶಾರುಖ್ ಕೂಡಾ ‘ಜೈಶ್ರೀರಾಮ್’ ಎಂದು ಕೂಗಿದರು.

ಶಾರುಖ್ ಖಾನ್ ಜೈಶ್ರೀರಾಮ್ ಎಂದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೂಲತಃ ಮುಸ್ಲಿಮನಾಗಿದ್ದರೂ ಹಿಂದೂ ಧರ್ಮದ ದೇವರ ಬಗ್ಗೆ ಗೌರವ ಸೂಚಿಸಿದ್ದಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಅಂತೂ ಅಂಬಾನಿ ಕುಟುಂಬ ಶಾರುಖ್ ಬಾಯಿಯಿಂದ ರಾಮ ನಾಮ ಹೇಳುವ ಹಾಗೆ ಮಾಡಿತು ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments