Webdunia - Bharat's app for daily news and videos

Install App

ಅನಂತ್ ಅಂಬಾನಿ ಜೊತೆ ಜೈಶ್ರೀರಾಮ್ ಎಂದ ಶಾರುಖ್ ಖಾನ್

Krishnaveni K
ಸೋಮವಾರ, 4 ಮಾರ್ಚ್ 2024 (11:05 IST)
ಜಾಮ್ ನಗರ: ಅನಂತ್ ಅಂಬಾನಿ ಪ್ರಿ ವೆಡ್ಡಿಂಗ್ ಕಾರ್ಯಕ್ರಮದ ವೇದಿಕೆಯಲ್ಲಿ ನಟ ಶಾರುಖ್ ಖಾನ್ ಜೈಶ್ರೀರಾಮ್ ಘೋಷಣೆ ಕೂಗಿದ್ದು ಎಲ್ಲರ ಗಮನ ಸೆಳೆದಿದೆ.

ಗುಜರಾತ್ ನ ಜಾಮ್ ನಗರದಲ್ಲಿ ನಡೆದ ಪ್ರಿ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ದೇಶ-ವಿದೇಶದ ವಿವಿಧ ಕ್ಷೇತ್ರದ ಗಣ್ಯರು ಆಗಮಿಸಿದ್ದರು. ಇಡೀ ಬಾಲಿವುಡ್ ತಾರೆಯರ ದಂಡೇ ಜಾಮ್ ನಗರದಲ್ಲಿ ಬೀಡು ಬಿಟ್ಟಿತ್ತು. ಖ್ಯಾತನಾಮರಿಂದ ಮನರಂಜನಾ ಕಾರ್ಯಕ್ರಮಗಳೂ ನಡೆದಿತ್ತು.

ಸ್ವತಃ ಶಾರುಖ್ ಖಾನ್ ನಿರೂಪಕರಾಗಿ ಅಂಬಾನಿ ಕುಟುಂಬದವರನ್ನು ವೇದಿಕೆ ಮೇಲೆ ಕರೆದು ಮಾತನಾಡಿಸಿದ್ದಲ್ಲದೆ, ಡ್ಯಾನ್ಸ್ ಗೆ ಹೆಜ್ಜೆ ಹಾಕಿದರು. ಈ ವೇಳೆ ಮದುಮಗ ಅನಂತ್ ಅಂಬಾನಿಯನ್ನು ಮಾತನಾಡಿಸಿದ್ದರು. ಅನಂತ್ ಅಂಬಾನಿ ಮಾತಿನ ನಡುವೆ ತಮ್ಮ ಕುಟುಂಬದ ದೈವ ಭಕ್ತಿಯ ಬಗ್ಗೆ ಹೇಳಿಕೊಂಡರು. ಎಲ್ಲವೂ ಆ ಭಗವಾನ್ ಶ್ರೀರಾಮ ಕೃಪೆ ಎಂದರು. ಅನಂತ್ ಹೀಗೆ ಹೇಳುತ್ತಿದ್ದಂತೇ ಶಾರುಖ್ ಕೂಡಾ ‘ಜೈಶ್ರೀರಾಮ್’ ಎಂದು ಕೂಗಿದರು.

ಶಾರುಖ್ ಖಾನ್ ಜೈಶ್ರೀರಾಮ್ ಎಂದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೂಲತಃ ಮುಸ್ಲಿಮನಾಗಿದ್ದರೂ ಹಿಂದೂ ಧರ್ಮದ ದೇವರ ಬಗ್ಗೆ ಗೌರವ ಸೂಚಿಸಿದ್ದಕ್ಕೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಅಂತೂ ಅಂಬಾನಿ ಕುಟುಂಬ ಶಾರುಖ್ ಬಾಯಿಯಿಂದ ರಾಮ ನಾಮ ಹೇಳುವ ಹಾಗೆ ಮಾಡಿತು ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಮುಂದಿನ ಸುದ್ದಿ
Show comments