Webdunia - Bharat's app for daily news and videos

Install App

ಸ್ಯಾಂಟ್ರೋ ಕಾರಿನಲ್ಲಿ ಶಾರುಕ್‌ಗೆ ಡ್ರಾಪ್ ಕೊಟ್ಟ ಸಿಎಂ ಮಮತಾ ಬ್ಯಾನರ್ಜಿ

Webdunia
ಗುರುವಾರ, 16 ನವೆಂಬರ್ 2017 (12:58 IST)
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಾಲಿವುಡ್ ಸೂಪರ್‌ಸ್ಟಾರ್ ಶಾರುಕ್ ಖಾನ್ ಮಧ್ಯ ಸಹೋದರಿ, ಸಹೋದರನ ಅನ್ಯೋನ್ಯವಾದ ಸಂಬಂಧವಿದೆ. ನಗರಕ್ಕೆ ಬಂದಾಗಲೆಲ್ಲಾ ಮಮತಾ ಬ್ಯಾನರ್ಜಿ(ದೀದಿ)ಯನ್ನು ಭೇಟಿ ಮಾಡುವ ಶಾರುಕ್‌ಗೆ ಕೋಲ್ಕತಾ ಎರಡನೇ ತವರುಮನೆಯಾಗಿ ಹೊರಹೊಮ್ಮಿದೆ.
  
ಕೋಲ್ಕತಾ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌ ಉದ್ಘಾಟನೆಗಾಗಿ ಕೋಲ್ಕತಾಗೆ ಆಗಮಿಸಿದ್ದ ಶಾರುಕ್‌ಗೆ, ಕಾರ್ಯಕ್ರಮ ಮುಗಿದ ನಂತರ ವಿಮಾನ ನಿಲ್ದಾಣಕ್ಕೆ ಡ್ರಾಪ್ ಮಾಡಿದ್ದು ಬೇರೆ ಯಾರು ಅಲ್ಲ. ಸ್ವತಃ ಸಿಎಂ ಬ್ಯಾನರ್ಜಿ. ಶಾರುಕ್ ಖಾನ್ ದೀದಿಯ ಸ್ಯಾಂಟ್ರೋ ಕಾರಿನಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ವಿಡಿಯೋ ವೈರಲ್ ಆಗಿದೆ. 
 
ಪ್ರಪಂಚದಲ್ಲಿರುವ ಎಲ್ಲಾ ಐಷಾರಾಮಿ ಸೌಲಭ್ಯ ಹೊಂದಿರುವ ಶಾರುಕ್, ಒಂದು ಸಣ್ಣ ಕಾರಿನಲ್ಲಿ ದೀದಿಯೊಂದಿಗೆ ಪ್ರಯಾಣಿಸಿರುವುದು ನಿಜಕ್ಕೂ ಆಶ್ಚರ್ಯಕರವಾಗಿದೆ.
 
ಒಂದು ಸಣ್ಣ ಕಾರಿನಲ್ಲಿ ಎಸ್‌ಆರ್‌ಕೆ ಸವಾರಿ ಮಾಡಿ ಎಷ್ಟು ಕಾಲವಾಗಿದೆಯೋ ಎನ್ನುವಂತೆ ವಿಮಾನ ನಿಲ್ದಾಣದಲ್ಲಿದ್ದ ಜನರು  ಆಸಕ್ತಿಯನ್ನು ತೋರುತ್ತಿದ್ದರು. ಆದರೆ, ಮೌನವಾಗಿ ಮುಂದೆ ಸಾಗಿದ ಶಾರುಕ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದ್ದರು ಎನ್ನಲಾಗಿದೆ.
 
ಏತನ್ಮಧ್ಯೆ, ವಿಮಾನ ನಿಲ್ದಾಣದಲ್ಲಿ ಇಳಿದ ಕೂಡಲೇ ಶಾರುಕ್ ಖಾನ್, ಸಿಎಂ ಬ್ಯಾನರ್ಜಿಯವರ ಕಾಲು ಮುಟ್ಟಿ ನಮಸ್ಕರಿಸಿದಾಗ ಅವರ ನಡುವಿನ ವಿಶೇಷ ಸಂಬಂಧ ನೆರೆದಿದ್ದ ಜನತೆಗೆ ಸ್ಪಷ್ಟವಾಗಿತ್ತು. ಸಹೋದರನಿಗೆ ಬೀಳ್ಕೋಡುವಂತೆ ದೀದಿ, ಶಾರುಕ್‌ರನ್ನು ನೋಡಿಕೊಂಡಿರುವುದು ನೆರೆದಿದ್ದವರಲ್ಲಿ ಸಂತಸದ ಸಂಭ್ರಮ ಕಂಡು ಬಂದಿತು. 
 
ಪ್ರಸಕ್ತ ವರ್ಷದಲ್ಲಿ ನಡೆದ ರಾಖಿ ಹಬ್ಬದಂದು ಟ್ವೀಟ್ ಮಾಡಿದ ಶಾರುಕ್, ಪ್ರತಿ ವರ್ಷ ರಾಖಿ ಹಬ್ಬದಂದು ದೀದಿಯ ಆಶೀರ್ವಾದಕ್ಕಾಗಿ ಕಾಯುತ್ತೇನೆ ಎಂದು ತಿಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments