Webdunia - Bharat's app for daily news and videos

Install App

ಚಂದಕಿಂತ ಚಂದ ಹಾಡು ಹಾಡಿದ್ದ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Krishnaveni K
ಸೋಮವಾರ, 26 ಫೆಬ್ರವರಿ 2024 (17:11 IST)
Photo Courtesy: Twitter
ಮುಂಬೈ: ಕಿಚ್ಚ ಸುದೀಪ್ ನಾಯಕರಾಗಿದ್ದ ಸ್ಪರ್ಶ ಸಿನಿಮಾದ ಚಂದಕಿಂತ ಚಂದ ನೀನೆ ಸುಂದರ ಎಂಬ ಸೂಪರ್ ಹಿಟ್ ಹಾಡು ಹಾಡಿದ್ದ ಗಾಯಕ ಪಂಕಜ್ ಉಧಾಸ್ ಇನ್ನು ನೆನಪು ಮಾತ್ರ.

ಅವರಿಗೆ 73 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅವರ ಪುತ್ರಿ ನಯಾಝ್ ಉಧಾಸ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ. ಗಝಲ್ ಶೈಲಿಯ ಹಾಡುಗಳಿಗೆ ಅವರು ಪ್ರಖ್ಯಾತರಾಗಿದ್ದರು.

ಕನ್ನಡದಲ್ಲಿ ಅವರು ಹಾಡಿದ ಚಂದಕಿಂತ ಚಂದ ಹಾಡನ್ನು ಯಾರು ತಾನೆ ಮರೆಯಲು ಸಾಧ್ಯ? ಅಲ್ಲದೆ ಅದೇ ಸಿನಿಮಾದಲ್ಲಿ ಬರೆಯದ ಮೌನದ ಕವಿತೆ ಹಾಡಾಯಿತು ಎಂಬ ಮತ್ತೊಂದು ಸೂಪರ್ ಹಿಟ್ ಹಾಡು ಕೊಟ್ಟಿದ್ದರು. ಈ ಹಾಡುಗಳು ಎಂದೆಂದಿಗೂ ಕನ್ನಡಿಗರ ಮರೆಯಲಾಗದಂತಹ ಹಾಡುಗಳು.1951 ರಲ್ಲಿ ಗುಜರಾತ್ ನಲ್ಲಿ ಜನಿಸಿದ ಪಂಕಜ್ ಉಧಾಸ್ 1980 ರಲ್ಲಿ ಗಝಲ್ ಹಾಡಿನ ಆಲ್ಬಂ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿದರು.

ಹಿಂದಿಯಲ್ಲಿ ಚಿಟ್ಟೀ ಆಯೀ ಹೇ,ಅವರಿಗೆ ಬ್ರೇಕ್ ನೀಡಿದ ಹಾಡು. ತಮ್ಮ ಸುಮಧುರ ಕಂಠದ ಹಾಡುಗಳಿಗೆ ಫಿಲಂ ಫೇರ್, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನೂ ಪಡೆದಿದ್ದರು.  ಅಲ್ಲದೆ ಭಾರತ ಸರ್ಕಾರ ಪದ್ಮ ಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಅಭಿಮಾನಿಗಳು, ಸಿನಿಮಾ ಸೆಲೆಬ್ರಿಟಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments