ಮಾನವೀಯತೆ ಮರೆದ ಸನ್ನಿ ಲಿಯೋನ್; ಕೇರಳದ ಪ್ರವಾಹ ಪರಿಹಾರ ನಿಧಿಗೆ 5 ಕೋಟಿ ರೂ.

Webdunia
ಸೋಮವಾರ, 20 ಆಗಸ್ಟ್ 2018 (18:01 IST)
ತಿರುವನಂತಪುರಂ: ಮಹಾಮಳೆಗೆ ಇಡೀ  ಕೇರಳವೇ ಬೆಚ್ಚಿಬಿದ್ದಿದೆ. ಕೆಲವು ನಟ, ನಟಿಯರು ತಮ್ಮಿಂದ ಆದ ಸಹಾಯ ಮಾಡಿದ್ದಾರೆ. ಇನ್ನು ಕೆಲವು ನಟ-ನಟಿಯರು ಸಹಾಯ ಮಾಡಿ ಎಂದು ನೆಪ ಮಾತ್ರಕ್ಕೆ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿ ಸುಮ್ಮನಾಗಿದ್ದಾರೆ. ಆದರೆ ಈ ನಟಿ ಮಾತ್ರ ಮಾನವೀಯತೆ ಮರೆದಿದ್ದಾಳೆ. ಹಾಗೇ ಅದನ್ನೂ ಎಲ್ಲಿಯೂ ಹೇಳಿಕೊಂಡಿಲ್ಲ. ಅಷ್ಟಕ್ಕೂ ಈ ನಟಿ ಎಂದರೆ ಎಲ್ಲರೂ ಮೂಗು ಮುರಿಯುವವರೇ ಹೆಚ್ಚು. ಆದರೆ ಇಂದು ಆಕೆ ತನ್ನ ಮಾನವೀಯತೆಯ ಮೂಲಕ ಎಲ್ಲರ ಮನಗೆದ್ದಿದ್ದಾರೆ.


ಬಾಲಿವುಡ್‍ನ ಮಾದಕ ಬೆಡಗಿ ಸನ್ನಿ ಲಿಯೋನ್ ಕೇರಳ ಪ್ರವಾಹ ಪರಿಹಾರ ನಿಧಿಗೆ 5 ಕೋಟಿ ರೂ. ನೀಡಿದ್ದಾರೆ ಎಂದು ಮಲೆಯಾಳಂ ಚಿತ್ರದ ನಿರ್ದೇಶಕರೊಬ್ಬರು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.


ಪ್ರವಾಹದಿಂದಾಗಿ ಕೇರಳ ತಲ್ಲಣಿಸಿಹೋಗಿದೆ. ಜನರು ಬೀದಿಗೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಪ್ರವಾಹ ಪರಿಹಾರ ನಿಧಿಗೆ ಸನ್ನಿ ಲಿಯೋನ್ 5 ಕೋಟಿ ರೂ. ನೀಡಿದ್ದಾರೆ. ಸನ್ನಿ ಲಿಯೋನ್ ಸಹಾಯದ ಬಗ್ಗೆ ಮಲೆಯಾಳಂ ನಿರ್ದೇಶಕ, ಬರಹಗಾರರಾದ ಅಜಯ್ ದೇವಲೋಕ ಪ್ರತಿಕ್ರಿಯಿಸಿ ಸನ್ನಿ ಲಿಯೋನ್‍ಗೆ ಧನ್ಯವಾದ ತಿಳಿಸಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.


‘ಸನ್ನಿ ಲಿಯೋನ್ ನಿಮಗೆ ತುಂಬಾ ಧನ್ಯವಾದಗಳು. ನಮ್ಮ ಕಷ್ಟದ ಸಮಯದಲ್ಲಿ ನೀವು ನೀಡಿದ ಈ ಕೊಡುಗೆಯನ್ನು ಕೇರಳಿಗರು ಎಂದಿಗೂ ಮರೆಯುವುದಿಲ್ಲ. ನಾನು ಈ ಸಮಯದಲ್ಲಿ ನಿಮಗೆ ಧನ್ಯವಾದ ತಿಳಿಸಲು ಇಷ್ಟಪಡುತ್ತೇನೆ ಕೇರಳ ನಿಮಗೆ ಚಿರಋಣಿಯಾಗಿರುತ್ತದೆ’ ಎಂದಿದ್ದಾರೆ.


ಕೇರಳ ಪ್ರವಾಹ ಪೀಡಿತರಿಗೆ 5 ಕೋಟಿ ರೂ. ನೀಡಿದ್ದರ ಕುರಿತು ಇದೂವರೆಗೂ ಸನ್ನಿ ಲಿಯೋನ್ ಎಲ್ಲಿಯೂ ಹೇಳಿಕೊಂಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಮುಂದಿನ ಸುದ್ದಿ