Select Your Language

Notifications

webdunia
webdunia
webdunia
Friday, 18 April 2025
webdunia

ದುಷ್ಕರ್ಮಿಯಿಂದ ಪೊಲೀಸ್ ಪೇದೆಯೊಬ್ಬರ ಮೇಲೆ ನಡೆದ ಹಲ್ಲೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂಪರ್ ಸ್ಟಾರ್ ರಜನೀಕಾಂತ್

ಚೆನ್ನೈ
ಚೆನ್ನೈ , ಶುಕ್ರವಾರ, 13 ಏಪ್ರಿಲ್ 2018 (09:34 IST)
ಚೆನ್ನೈ : ಐಪಿಎಲ್ ಪಂದ್ಯಾಟದ ವೇಳೆ ದುಷ್ಕರ್ಮಿಯೊಬ್ಬ ಪೊಲೀಸ್ ಪೇದೆಯೊಬ್ಬರ ಮೇಲೆ ಹಲ್ಲೆ ಮಾಡಿರುವುದನ್ನು ಕಂಡು ಸೂಪರ್ ಸ್ಟಾರ್ ರಜನೀಕಾಂತ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕಾವೇರಿ ವಿವಾದ ಸಂಬಂಧ ಚೆನ್ನೈನಲ್ಲಿ ಐಪಿಎಲ್‌ ಪಂದ್ಯಗಳನ್ನು ರದ್ದುಮಾಡಬೇಕೆಂದು ಅನೇಕರು ವಿರೋಧ ವ್ಯಕ್ತಪಡಿಸಿದ್ದ ಕಾರಣ ಮಂಗಳವಾರ ಚೆನ್ನೈ ಮತ್ತು ಕೋಲ್ಕತ್ತಾ ನಡುವಿನ ಪಂದ್ಯವನ್ನು ಬಿಗಿ ಪೊಲೀಸ್‌ ಭದ್ರತೆಯಲ್ಲಿ ಏರ್ಪಡಿಸಲಾಗಿತ್ತು. ಆ ವೇಳೆ ಸ್ಟೇಡಿಯಂ ಹೊರ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್‌ ಪೇದೆಯ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿದ್ದು, ಈ ವಿಡಿಯೋ ವನ್ನು ಟ್ವೀಟ್ ಮಾಡಿದ  ಸೂಪರ್ ಸ್ಟಾರ್ ರಜನೀಕಾಂತ್ ಅವರು,’ ನಮ್ಮಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಕಾರ್ಯನಿರತ ಪೇದೆ ಮೇಲೆ ದುಷ್ಕರ್ಮಿ ದಾಳಿ ಮಾಡಿದ್ದಾನೆ. ಆ ದುಷ್ಕರ್ಮಿಯನ್ನು ಬಂಧಿಸಿ, ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಕ್ಯಾಪ್ಷನ್‌ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಪುಟ್ಟ ಅಭಿಮಾನಿಗೆ ಸಹಾಯಹಸ್ತ ನೀಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್