Select Your Language

Notifications

webdunia
webdunia
webdunia
webdunia

'ಮಿಶನ್ ಮಂಗಲ್' ಚಿತ್ರಕ್ಕೆ ಎದುರಾಗಿದೆ ಸಂಕಷ್ಟ

'ಮಿಶನ್ ಮಂಗಲ್' ಚಿತ್ರಕ್ಕೆ ಎದುರಾಗಿದೆ ಸಂಕಷ್ಟ
ಮುಂಬೈ , ಮಂಗಳವಾರ, 27 ನವೆಂಬರ್ 2018 (07:32 IST)
ಮುಂಬೈ :  ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ಮತ್ತು ನಟಿ ವಿದ್ಯಾ ಬಾಲನ್ ಜೋಡಿಯ 'ಮಿಶನ್ ಮಂಗಲ್' ಚಿತ್ರಕ್ಕೆ ಇದೀಗ ಖ್ಯಾತ ನಿರ್ದೇಶಕಿ ರಾಧಾ ಭಾರಧ್ವಾಜ್ ವಿರೋಧ ವ್ಯಕ್ತಪಡಿಸಿದ್ದಾರೆ.


ಭಾರತದ 2014ರ ಮಂಗಳಯಾನ ಕುರಿತ ಚಿತ್ರ ಇದಾಗಿದೆ. ಆದರೆ ಇದು ತಮ್ಮ ಮೂಲ ಕಥೆಯಾಗಿದ್ದು,  ಕಳೆದ ವರ್ಷ ವಿದ್ಯಾ ಬಾಲನ್ ಅವರ ಮ್ಯಾನೇಜರ್ ಆಗಿದ್ದ ಅತುಲ್ ಕಸ್ಬೇಕರ್ ತಮ್ಮ ಅನುಮತಿ ಇಲ್ಲದೇ ಇದನ್ನು ನಟಿ ವಿದ್ಯಾಬಾಲನ್ ಅವರಿಗೆ ತೋರಿಸಿದ್ದಾರೆ ಎಂದು ಆರೋಪಿಸಿ ನಿರ್ದೇಶಕಿ ರಾಧಾ ಭಾರಧ್ವಾಜ್ ಚಿತ್ರಕ್ಕೆ ತಡೆ ಕೋರಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ.


ಅತುಲ್ ಕಸ್ಬೇಕರ್ ಈ ಮೊದಲು ರಾಧಾ ಭಾರಧ್ವಾಜ್ ರಚಿತ ಕಥೆಯನ್ನು ಚಿತ್ರ ಮಾಡುವುದಾಗಿ ಒಪ್ಪಂದ ಮಾಡಿಕೊಂಡು, ನಂತರ ಅವರ ಅನುಮತಿ ಇಲ್ಲದೆಯೇ ವಿದ್ಯಾ ಬಾಲನ್ ಅವರಿಗೆ ಚಿತ್ರಕಥೆ ಕೊಟ್ಟಿದ್ದ ಕಾರಣ ಕೋಪಗೊಂಡ ನಿರ್ದೇಶಕಿ ರಾಧಾ ಭಾರಧ್ವಾಜ್ ಅತುಲ್ ಕಸ್ಬೇಕರ್ ಜೊತೆ ಮಾಡಿಕೊಂಡಿದ್ದ ಒಪ್ಪಂದವನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ತಮ್ಮ ಚಿತ್ರಕ್ಕಾಗಿ ಬೇರೊಬ್ಬ ನಿರ್ಮಾಪಕರ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇದೀಗ ಅತುಲ್ ಕಸ್ಬೇಕರ್ ರಾಧಾ ಭಾರಧ್ವಾಜ್ ಅವರ ಚಿತ್ರಕಥೆಯನ್ನೇ ಮಿಶನ್ ಮಂಗಲ್ ಚಿತ್ರಕ್ಕೆ ಬಳಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಶಿಫ್ಟ್ ಮಾಡುವ ನಿರ್ಧಾರ ಮಾಡಿದ ಧ್ರುವ ಸರ್ಜಾ. ಕಾರಣವೇನು ಗೊತ್ತಾ?