Webdunia - Bharat's app for daily news and videos

Install App

'ಮಿಶನ್ ಮಂಗಲ್' ಚಿತ್ರಕ್ಕೆ ಎದುರಾಗಿದೆ ಸಂಕಷ್ಟ

Webdunia
ಮಂಗಳವಾರ, 27 ನವೆಂಬರ್ 2018 (07:32 IST)
ಮುಂಬೈ :  ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ಮತ್ತು ನಟಿ ವಿದ್ಯಾ ಬಾಲನ್ ಜೋಡಿಯ 'ಮಿಶನ್ ಮಂಗಲ್' ಚಿತ್ರಕ್ಕೆ ಇದೀಗ ಖ್ಯಾತ ನಿರ್ದೇಶಕಿ ರಾಧಾ ಭಾರಧ್ವಾಜ್ ವಿರೋಧ ವ್ಯಕ್ತಪಡಿಸಿದ್ದಾರೆ.


ಭಾರತದ 2014ರ ಮಂಗಳಯಾನ ಕುರಿತ ಚಿತ್ರ ಇದಾಗಿದೆ. ಆದರೆ ಇದು ತಮ್ಮ ಮೂಲ ಕಥೆಯಾಗಿದ್ದು,  ಕಳೆದ ವರ್ಷ ವಿದ್ಯಾ ಬಾಲನ್ ಅವರ ಮ್ಯಾನೇಜರ್ ಆಗಿದ್ದ ಅತುಲ್ ಕಸ್ಬೇಕರ್ ತಮ್ಮ ಅನುಮತಿ ಇಲ್ಲದೇ ಇದನ್ನು ನಟಿ ವಿದ್ಯಾಬಾಲನ್ ಅವರಿಗೆ ತೋರಿಸಿದ್ದಾರೆ ಎಂದು ಆರೋಪಿಸಿ ನಿರ್ದೇಶಕಿ ರಾಧಾ ಭಾರಧ್ವಾಜ್ ಚಿತ್ರಕ್ಕೆ ತಡೆ ಕೋರಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ.


ಅತುಲ್ ಕಸ್ಬೇಕರ್ ಈ ಮೊದಲು ರಾಧಾ ಭಾರಧ್ವಾಜ್ ರಚಿತ ಕಥೆಯನ್ನು ಚಿತ್ರ ಮಾಡುವುದಾಗಿ ಒಪ್ಪಂದ ಮಾಡಿಕೊಂಡು, ನಂತರ ಅವರ ಅನುಮತಿ ಇಲ್ಲದೆಯೇ ವಿದ್ಯಾ ಬಾಲನ್ ಅವರಿಗೆ ಚಿತ್ರಕಥೆ ಕೊಟ್ಟಿದ್ದ ಕಾರಣ ಕೋಪಗೊಂಡ ನಿರ್ದೇಶಕಿ ರಾಧಾ ಭಾರಧ್ವಾಜ್ ಅತುಲ್ ಕಸ್ಬೇಕರ್ ಜೊತೆ ಮಾಡಿಕೊಂಡಿದ್ದ ಒಪ್ಪಂದವನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ತಮ್ಮ ಚಿತ್ರಕ್ಕಾಗಿ ಬೇರೊಬ್ಬ ನಿರ್ಮಾಪಕರ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಇದೀಗ ಅತುಲ್ ಕಸ್ಬೇಕರ್ ರಾಧಾ ಭಾರಧ್ವಾಜ್ ಅವರ ಚಿತ್ರಕಥೆಯನ್ನೇ ಮಿಶನ್ ಮಂಗಲ್ ಚಿತ್ರಕ್ಕೆ ಬಳಸಿಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments