Webdunia - Bharat's app for daily news and videos

Install App

‘ಉಪೇಂದ್ರ ರಿಯಲ್ ಹೀರೋ ಅಲ್ಲ, ರೀಲ್ ಹೀರೋ ಯಾರು ನಂಬಬೇಡಿ’

Webdunia
ಸೋಮವಾರ, 19 ಮಾರ್ಚ್ 2018 (06:02 IST)
ಬೆಂಗಳೂರು : ನಟ ಉಪೇಂದ್ರ ಅವರ ಆಪ್ತ ಕಾರ್ಯದರ್ಶಿಯಾದ ಹಿತೇಶ್ ಎಂಬುವವರು  ಬೆಂಗಳೂರಿನ ಸುಂಕದಕಟ್ಟೆಯ ಮುದ್ದಿನಪಾಳ್ಯದಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕೆಪಿಜೆಪಿ ಮಹಿಳಾ ಉಪಾಧ್ಯಕ್ಷೆ ಲಲಿತಾ ಮೇರಿ ಎಂಬುವವರು ಆರೋಪಿಸಿದ್ದಾರೆ.


ಕೆಪಿಜೆಪಿ ಮಹಿಳಾ ಉಪಾಧ್ಯಕ್ಷೆ ಲಲಿತಾ ಮೇರಿ ಎಂಬುವವರು ಪಕ್ಷದ ಮಹಿಳಾ ವಾಟ್ಸಾಪ್ ಗ್ರೂಪ್‍ಗೆ ‘ಉಪೇಂದ್ರ ರಿಯಲ್ ಹೀರೋ ಅಲ್ಲ, ರೀಲ್ ಹೀರೋ ಯಾರು ನಂಬಬೇಡಿ’ ಎಂದು ಮಸೇಜ್ ಮಾಡಿದ ಹಿನ್ನಲೆಯಲ್ಲಿ ಇದನ್ನು ನೋಡಿ ಕೋಪಗೊಂಡ ಹಿತೇಶ್ ಈ ವಿಚಾರವಾಗಿ ಲಲಿತಾ ಮೇರಿ ಅವರ ಜೊತೆ ಜಗಳವಾಡಿದ್ದರು. ನಂತರ ರಾತ್ರಿ 10 ಗಂಟೆ ಸುಮಾರಿಗೆ ಸುಂಕದಕಟ್ಟೆಯ ಕೆಇಎಲ್ ಕಾಲೇಜ್ ಬಳಿ ಲಲಿತಾ ಮೇರಿ ಕಾರಿನಲ್ಲಿ ಹೋಗುತ್ತಿರುವಾಗ ಹಿತೇಶ್ ಮತ್ತು ಆತನ ಸ್ನೇಹಿತ ಹೆಲ್ಮೆಟ್ ಧರಿಸಿ ಬೈಕ್‍ನಲ್ಲಿ ಬಂದು ಹಲ್ಲೆ ಮಾಡಿ ‘ನಮ್ ಬಾಸ್ ಬಗ್ಗೆ ಕೆಟ್ಟದಾಗಿ ಮಾತಾನಾಡುತ್ತೀಯಾ’ ಎಂದು ಹೇಳಿ ಪರಾರಿಯಾಗಿರುವುದಾಗಿ ಲಲಿತಾ ಮೇರಿ ಅವರು ಆರೋಪಿಸಿದ್ದಾರೆ.


ಹಾಗೇ ಈ ಘಟನೆಯ ಹಿಂದೆ ನಟ ಉಪೇಂದ್ರ ಅವರ ಕೈವಾಡ ಇದೆ ಎಂಬುವುದಾಗಿಯೂ ಕೂಡ ಆರೋಪ ಮಾಡಿದ್ದಾರೆ. ಇದೀಗ ಲಲಿತಾ ಮೇರಿ ಅವರು ಸುಂಕದಕಟ್ಟೆಯ ಲಕ್ಷ್ಮೀ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪ್ರಕರಣ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments